ಆದಾಯ ತೆರಿಗೆ ಇಲಾಖೆ 
ವಾಣಿಜ್ಯ

ಆದಾಯ ತೆರಿಗೆ ಬಾಕಿದಾರರ ಬಗ್ಗೆ ಮಾಹಿತಿ ನೀಡಿದರೆ 15 ಲಕ್ಷ ರು. ಬಹುಮಾನ

ಆದಾಯ ತೆರಿಗೆ ಪಾವತಿ ಮಾಡಬೇಕಿರುವ ಬಾಕಿದಾರರ ಬಗ್ಗೆ ಸೂಕ್ತ ಮಾಹಿತಿ ನೀಡಿದವರಿಗೆ 15 ಲಕ್ಷ ಬಹುಮಾನ ನೀಡುವುದಾಗಿ ಆದಾಯ ತೆರಿಗೆ ಇಲಾಖೆ ಘೋಷಿಸಿದೆ.

ನವದೆಹಲಿ: ಆದಾಯ ತೆರಿಗೆ ಪಾವತಿ ಮಾಡಬೇಕಿರುವ ಬಾಕಿದಾರರ ಬಗ್ಗೆ ಸೂಕ್ತ ಮಾಹಿತಿ ನೀಡಿದವರಿಗೆ 15 ರು. ಲಕ್ಷ ಬಹುಮಾನ ನೀಡುವುದಾಗಿ ಆದಾಯ ತೆರಿಗೆ ಇಲಾಖೆ ಘೋಷಿಸಿದೆ.

ಹೊಸ ಮಾರ್ಗಸೂಚಿಗಳನ್ನು ರಚಿಸಿರುವ ಐಟಿ ಇಲಾಖೆ, ತೆರಿಗೆ ಪಾವತಿ ಮಾಡದೇ ಇರುವವರ ಬಗ್ಗೆ ಕ್ರಮ ಕೈಗೊಳ್ಳಬಹುದಾದ ರೀತಿಯಲ್ಲಿ ಮಾಹಿತಿ ನೀಡುವವರಿಗೆ, ಬಾಕಿ ಪಾವತಿಯಾಗಬೇಕಿದ್ದ ತೆರಿಗೆಯ ಶೇ.10 ರಷ್ಟು ಹಣ(ಸುಮಾರು 15 ಲಕ್ಷ ರೂಪಾಯಿ) ಬಹುಮಾನ ನೀಡುವುದಾಗಿ ತಿಳಿಸಿದೆ. ಈ ಬಗ್ಗೆ ಇಲಾಖೆಯ ಎಲ್ಲಾ ಅಧಿಕಾರಿಗಳಿಗೂ ಮಾಹಿತಿ ರವಾನಿಸಲಾಗಿದೆ.
ತೆರಿಗೆ ಹಣ ವಸೂಲಿ ಮಾಡುವುದು ಅತಿ ದೊಡ್ಡ ಸವಾಲಿನ ಕೆಲಸವಾಗಿದ್ದು, ಸರ್ಕಾರಕ್ಕೆ ಬರವೇಕಿರುವ ತೆರಿಗೆ ಹಣವನ್ನು ಸುಲಭವಾಗಿ ಸಂಗ್ರಹಿಸಲು ಆದಾಯ ಇಲಾಖೆ ಈ ಮಾರ್ಗ ಕಂಡುಕೊಂಡಿದೆ. ತೆರಿಗೆ ವಂಚಕರ ಬಗ್ಗೆ  ಮಾಹಿತಿ ನಿಡುವವರ ಗುರುತನ್ನು ಗೌಪ್ಯವಾಗಿಡಲಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.
ವರಮಾನ ತೆರಿಗೆ ವಿವರ ಸಲ್ಲಿಸಲು ವಿಧಿಸಿದ್ದ ಗಡುವನ್ನು ಕೇಂದ್ರ ಸರ್ಕಾರ ಸೆ.7 ವರೆಗೆ ವಿಸ್ತರಿಸಿತ್ತು. ಕೇಂದ್ರ ಸರ್ಕಾರ ಪ್ರಸಕ್ತ ಹಣಕಾಸು ವರ್ಷದಲ್ಲಿ 7 .98 ಲಕ್ಷ ಕೋಟಿ ರೂಪಾಯಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT