ವಾಣಿಜ್ಯ

ಜಾಗತಿಕ ಆರ್ಥಿಕ ಕುಸಿತದ ಪ್ರತಿಕೂಲ ಪರಿಣಾಮಗಳು ಭಾರತಕ್ಕೆ ತಟ್ಟುವುದಿಲ್ಲ: ಅರುಣ್ ಜೇಟ್ಲಿ

ಜಾಗತಿಕ ಆರ್ಥಿಕ ಕುಸಿತದ ಪ್ರತಿಕೂಲ ಪರಿಣಾಮಗಳಿಂದ ಭಾರತ ರಕ್ಷಿಸಲ್ಪಟ್ಟಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಸಿಂಗಪೂರ್: ಜಾಗತಿಕ ಆರ್ಥಿಕ ಕುಸಿತದ ಪ್ರತಿಕೂಲ ಪರಿಣಾಮಗಳಿಂದ ಭಾರತ ರಕ್ಷಿಸಲ್ಪಟ್ಟಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಬೇರೆ ರಾಷ್ಟ್ರಗಳ ಮೇಲೆ ಆರ್ಥಿಕ ಕುಸಿತ ಪರಿಣಾಮ ಬೀರುತ್ತಿದ್ದರೂ, ಅದು ಭಾರತವನ್ನು ತಟ್ಟುತ್ತಿಲ್ಲ. ಈಗಲೂ ಭಾರತ ಜಾಗತಿಕ ಆರ್ಥಿಕತೆಯ ಉಜ್ವಲ ತಾಣವಾಗಿದೆ. ಭಾರತ ಚೀನಾ ಉತ್ಪಾದನಾ ಸರಣಿಯ ಭಾಗವಲ್ಲ, ಸರಕುಗಳು ಮತ್ತು ತೈಲ ಉತ್ಪನ್ನಗಳು ವ್ಯತಿರಿಕ್ತ ಪರಿಣಾಮ ಎದುರಿಸುತ್ತಿವೆ. ಆದರೆ ನಿವ್ವಳ ಆಮದು ಮಾಡಿಕೊಳ್ಳುತ್ತಿರುವ ಭಾರತಕ್ಕೆ ಇದರ ಪರಿಣಾಮ ಉಂಟಾಗುತ್ತಿಲ್ಲ ಎಂದು ಜೇಟ್ಲಿ ತಿಳಿಸಿದ್ದಾರೆ. 
ಜಾಗತಿಕ ಆರ್ಥಿಕತೆ ಕುಸಿಯುತ್ತಿದ್ದರೂ, ಭಾರತದ ಆರ್ಥಿಕತೆಯ ಭರವಸೆಯ ಪ್ರದೇಶಗಳಲ್ಲಿ ಒಂದಾಗಿದೆ ಎಂದು ಜೇಟ್ಲಿ ಹೇಳಿರುವುದನ್ನು ಸಿಂಗಪೂರ್ ನ ಪತ್ರಿಕೆಯೊಂದು ವರದಿ ಮಾಡಿದೆ. ಕೇಂದ್ರ ಸರ್ಕಾರ ಕ್ರಮಬದ್ಧವಾದ ವೇಗದಲ್ಲಿ ಸಾಗುತ್ತಿದೆ, ಸರ್ಕಾರದ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಜೇಟ್ಲಿ ಹೇಳಿದ್ದಾರೆ. ಸೆ.18 ರಂದು ಅರುಣ್ ಜೇಟ್ಲಿ, ಸಿಂಗಪೋರ್ ಶೃಂಗಸಭೆ 2015 ರಲ್ಲಿ ಭಾಗಿಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT