ವಾಣಿಜ್ಯ

ಜಾಗತಿಕ ಆರ್ಥಿಕ ಕುಸಿತದ ಪ್ರತಿಕೂಲ ಪರಿಣಾಮಗಳು ಭಾರತಕ್ಕೆ ತಟ್ಟುವುದಿಲ್ಲ: ಅರುಣ್ ಜೇಟ್ಲಿ

ಜಾಗತಿಕ ಆರ್ಥಿಕ ಕುಸಿತದ ಪ್ರತಿಕೂಲ ಪರಿಣಾಮಗಳಿಂದ ಭಾರತ ರಕ್ಷಿಸಲ್ಪಟ್ಟಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಸಿಂಗಪೂರ್: ಜಾಗತಿಕ ಆರ್ಥಿಕ ಕುಸಿತದ ಪ್ರತಿಕೂಲ ಪರಿಣಾಮಗಳಿಂದ ಭಾರತ ರಕ್ಷಿಸಲ್ಪಟ್ಟಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಬೇರೆ ರಾಷ್ಟ್ರಗಳ ಮೇಲೆ ಆರ್ಥಿಕ ಕುಸಿತ ಪರಿಣಾಮ ಬೀರುತ್ತಿದ್ದರೂ, ಅದು ಭಾರತವನ್ನು ತಟ್ಟುತ್ತಿಲ್ಲ. ಈಗಲೂ ಭಾರತ ಜಾಗತಿಕ ಆರ್ಥಿಕತೆಯ ಉಜ್ವಲ ತಾಣವಾಗಿದೆ. ಭಾರತ ಚೀನಾ ಉತ್ಪಾದನಾ ಸರಣಿಯ ಭಾಗವಲ್ಲ, ಸರಕುಗಳು ಮತ್ತು ತೈಲ ಉತ್ಪನ್ನಗಳು ವ್ಯತಿರಿಕ್ತ ಪರಿಣಾಮ ಎದುರಿಸುತ್ತಿವೆ. ಆದರೆ ನಿವ್ವಳ ಆಮದು ಮಾಡಿಕೊಳ್ಳುತ್ತಿರುವ ಭಾರತಕ್ಕೆ ಇದರ ಪರಿಣಾಮ ಉಂಟಾಗುತ್ತಿಲ್ಲ ಎಂದು ಜೇಟ್ಲಿ ತಿಳಿಸಿದ್ದಾರೆ. 
ಜಾಗತಿಕ ಆರ್ಥಿಕತೆ ಕುಸಿಯುತ್ತಿದ್ದರೂ, ಭಾರತದ ಆರ್ಥಿಕತೆಯ ಭರವಸೆಯ ಪ್ರದೇಶಗಳಲ್ಲಿ ಒಂದಾಗಿದೆ ಎಂದು ಜೇಟ್ಲಿ ಹೇಳಿರುವುದನ್ನು ಸಿಂಗಪೂರ್ ನ ಪತ್ರಿಕೆಯೊಂದು ವರದಿ ಮಾಡಿದೆ. ಕೇಂದ್ರ ಸರ್ಕಾರ ಕ್ರಮಬದ್ಧವಾದ ವೇಗದಲ್ಲಿ ಸಾಗುತ್ತಿದೆ, ಸರ್ಕಾರದ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಜೇಟ್ಲಿ ಹೇಳಿದ್ದಾರೆ. ಸೆ.18 ರಂದು ಅರುಣ್ ಜೇಟ್ಲಿ, ಸಿಂಗಪೋರ್ ಶೃಂಗಸಭೆ 2015 ರಲ್ಲಿ ಭಾಗಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT