ಅರುಣ್ ಜೆಟ್ಲಿ 
ವಾಣಿಜ್ಯ

ಬಡ್ಡಿ ದರ ಕಡಿತಗೊಳಿಸುವಂತೆ ಆರ್ ಬಿಐ ಗೆ ಅರುಣ್ ಜೇಟ್ಲಿ ಸಲಹೆ

ಆರ್ ಬಿಐ ನ ಹೊಸ ಹಣಕಾಸು ನೀತಿ ಪ್ರಕಟವಾಗುವ ಮುನ್ನಾ ದಿನ ಬಡ್ಡಿ ದರಗಳ ಬಗ್ಗೆ ಮಾತನಾಡಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೆಟ್ಲಿ, ಬಡ್ಡಿ ದರ ಕಡಿತಗೊಳಿಸುವಂತೆ ಸಲಹೆ ನೀಡಿದ್ದಾರೆ.

ನವದೆಹಲಿ: ಆರ್ ಬಿಐ ನ ಹೊಸ ಹಣಕಾಸು ನೀತಿ ಪ್ರಕಟವಾಗುವ ಮುನ್ನಾ ದಿನ ಬಡ್ಡಿ ದರಗಳ ಬಗ್ಗೆ ಮಾತನಾಡಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೆಟ್ಲಿ, ಬಡ್ಡಿ ದರ ಕಡಿತಗೊಳಿಸುವಂತೆ ಸಲಹೆ ನೀಡಿದ್ದಾರೆ.
ಸಿಐಐ ನ ವಾರ್ಷಿಕ ಅಧಿವೇಶನವನ್ನುದ್ದೇಶಿಸಿ ಮಾತನಾಡಿರುವ ಅರುಣ್ ಜೇಟ್ಲಿ, ಹೆಚ್ಚಿನ ಬಡ್ಡಿ ದರ ಆರ್ಥಿಕತೆ ಮೇಲೆ ಪ್ರತಿಕೂಲ ಪರಿಣಾಮ ಬರಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ವಿತ್ತೀಯ ಕೊರತೆಯನ್ನು ಕಡಿಮೆ ಮಾಡಲು ಬದ್ಧವಾಗಿದೆ. ಅಂತೆಯೇ ಹಣದುಬ್ಬರ ನಿಯಂತ್ರಣದಲ್ಲಿದ್ದು ಸ್ಪರ್ಧಾತ್ಮಕ ದರದಲ್ಲಿ ಬಡ್ಡಿ ದರ ನಿಗದಿಪಡಿಸಲು ಸಾಧ್ಯವಿದೆ ಎಂದಿದ್ದಾರೆ.

ಬಡ್ಡಿ ದರ ಸೇರಿದಂತೆ ಆರ್ಥಿಕತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ದೇಶದಲ್ಲಿ ಹೆಚ್ಚಿನ ಚರ್ಚೆ ನಡೆಯಬೇಕು, ಕೆಲವು ರಾಜಕೀಯ ಗುಂಪುಗಳು ಹೆಚ್ಚಿನ ಬಡ್ಡಿ ದರವನ್ನು ಬೆಂಬಲಿಸುತ್ತಿವೆ. ಹೆಚ್ಚಿನ ಬಡ್ಡಿ ದರ ಆರ್ಥಿಕ ಜಡತ್ವಕ್ಕೆ ಕಾರಣವಾಗಲಿದೆ ಎಂದು ಜೇಟ್ಲಿ ತಿಳಿಸಿದ್ದಾರೆ. ಭಾರತದಂತಹ ಪ್ರಜಾಪ್ರಭುತ್ವದಲ್ಲಿ ಹಲವು ಸವಾಲುಗಳಿವೆ, ಆರ್ಥಿಕತೆಗೆ ಸಂಬಂಧಿಸಿದ ವಿಷಯಗಳ ಚರ್ಚೆ ಸರಿಯಾದ ದಿಕ್ಕಿನಲ್ಲಿ ನಡೆಸುವುದು ಅತಿ ದೊಡ್ಡ ಸವಾಲು ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ. ಆರ್ ಬಿಐ 2016-17 ನೇ ವರ್ಷದ ಪ್ರಥಮ ಹಣಕಾಸು ನೀತಿಯನ್ನು ಪ್ರಕಟ ಮಾಡಲಿದ್ದು ಬಡ್ಡಿ ದರ ಇಳಿಕೆ ಮಾಡುವ ಬಗ್ಗೆ ನಿರೀಕ್ಷೆಗಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT