ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ 
ವಾಣಿಜ್ಯ

ಇಪಿಎಫ್ ಬಡ್ಡಿದರ ಶೇ.8.7ರಿಂದ ಶೇ.8.8ಕ್ಕೆ ಏರಿಕೆ

ಕಾರ್ಮಿಕ ಸಂಘಟನೆಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ಕಡೆಗೂ ನೌಕರರ ಭವಿಷ್ಯನಿಧಿ(ಇಪಿಎಫ್) ಠೇವಣಿಯ ಬಡ್ಡಿದರವನ್ನು ಶೇ.8.7ರಿಂದ 8.8ಕ್ಕೆ ಏರಿಕೆ...

ನವದೆಹಲಿ: ಕಾರ್ಮಿಕ ಸಂಘಟನೆಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ಕಡೆಗೂ ನೌಕರರ ಭವಿಷ್ಯನಿಧಿ(ಇಪಿಎಫ್) ಠೇವಣಿಯ ಬಡ್ಡಿದರವನ್ನು ಶೇ.8.7ರಿಂದ 8.8ಕ್ಕೆ ಏರಿಕೆ ಮಾಡಲು ನಿರ್ಧರಿಸಿದೆ.
ಇತ್ತಿಚೀಗಷ್ಟೆ ಇಪಿಎಫ್ ಬಡ್ಡಿದರವನ್ನು 2015–16ನೆ ಸಾಲಿಗೆ ಶೇ 8.7ರಷ್ಟು ನಿಗದಿ ಮಾಡಿ ಕೇಂದ್ರ ಹಣಕಾಸು ಸಚಿವಾಲಯ ಆದೇಶ ಹೊರಡಿಸಿತ್ತು. ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕಾರ್ಮಿಕ ಸಂಘಟನೆಗಳು ಇಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದವು.
ಈ ವಿಷಯದ ಕುರಿತು ಹಣಕಾಸು ಸಚಿವ ಅರುಣ್‌ ಜೇಟ್ಲಿ ಜತೆ ಚರ್ಚಿಸುವುದಾಗಿ ಭರವಸೆ ನೀಡಿದ್ದ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಅವರು, ಶೇ 8.8ರಷ್ಟು ಬಡ್ಡಿದರವನ್ನು ಏಕೆ ನಿಗದಿಮಾಡಬೇಕು ಎನ್ನುವುದಕ್ಕೆ ಎಲ್ಲಾ ರೀತಿಯ ಸಮರ್ಥನೆಯನ್ನೂ ಹಣಕಾಸು ಸಚಿವಾಲಯಕ್ಕೆ ಕೊಡುವುದಾಗಿ ಹೇಳಿದ್ದರು.
ಇಪಿಎಫ್ ಬಡ್ಡಿದರವರನ್ನು ಶೇ 8.8ಕ್ಕೆ ಏರಿಕೆ ಮಾಡುವಂತೆ ಇಪಿಎಫ್‌ಒ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಆದರೆ ಶೇ.8.8 ಬಡ್ಡಿದರ ನೀಡಲೂ ಸಾಧ್ಯವಿಲ್ಲ ಹಣಕಾಸು ಸಚಿವಾಲಯ ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

SCROLL FOR NEXT