ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ 
ವಾಣಿಜ್ಯ

ಇಪಿಎಫ್ ಬಡ್ಡಿದರ ಶೇ.8.7ರಿಂದ ಶೇ.8.8ಕ್ಕೆ ಏರಿಕೆ

ಕಾರ್ಮಿಕ ಸಂಘಟನೆಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ಕಡೆಗೂ ನೌಕರರ ಭವಿಷ್ಯನಿಧಿ(ಇಪಿಎಫ್) ಠೇವಣಿಯ ಬಡ್ಡಿದರವನ್ನು ಶೇ.8.7ರಿಂದ 8.8ಕ್ಕೆ ಏರಿಕೆ...

ನವದೆಹಲಿ: ಕಾರ್ಮಿಕ ಸಂಘಟನೆಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ಕಡೆಗೂ ನೌಕರರ ಭವಿಷ್ಯನಿಧಿ(ಇಪಿಎಫ್) ಠೇವಣಿಯ ಬಡ್ಡಿದರವನ್ನು ಶೇ.8.7ರಿಂದ 8.8ಕ್ಕೆ ಏರಿಕೆ ಮಾಡಲು ನಿರ್ಧರಿಸಿದೆ.
ಇತ್ತಿಚೀಗಷ್ಟೆ ಇಪಿಎಫ್ ಬಡ್ಡಿದರವನ್ನು 2015–16ನೆ ಸಾಲಿಗೆ ಶೇ 8.7ರಷ್ಟು ನಿಗದಿ ಮಾಡಿ ಕೇಂದ್ರ ಹಣಕಾಸು ಸಚಿವಾಲಯ ಆದೇಶ ಹೊರಡಿಸಿತ್ತು. ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕಾರ್ಮಿಕ ಸಂಘಟನೆಗಳು ಇಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದವು.
ಈ ವಿಷಯದ ಕುರಿತು ಹಣಕಾಸು ಸಚಿವ ಅರುಣ್‌ ಜೇಟ್ಲಿ ಜತೆ ಚರ್ಚಿಸುವುದಾಗಿ ಭರವಸೆ ನೀಡಿದ್ದ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಅವರು, ಶೇ 8.8ರಷ್ಟು ಬಡ್ಡಿದರವನ್ನು ಏಕೆ ನಿಗದಿಮಾಡಬೇಕು ಎನ್ನುವುದಕ್ಕೆ ಎಲ್ಲಾ ರೀತಿಯ ಸಮರ್ಥನೆಯನ್ನೂ ಹಣಕಾಸು ಸಚಿವಾಲಯಕ್ಕೆ ಕೊಡುವುದಾಗಿ ಹೇಳಿದ್ದರು.
ಇಪಿಎಫ್ ಬಡ್ಡಿದರವರನ್ನು ಶೇ 8.8ಕ್ಕೆ ಏರಿಕೆ ಮಾಡುವಂತೆ ಇಪಿಎಫ್‌ಒ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಆದರೆ ಶೇ.8.8 ಬಡ್ಡಿದರ ನೀಡಲೂ ಸಾಧ್ಯವಿಲ್ಲ ಹಣಕಾಸು ಸಚಿವಾಲಯ ಹೇಳಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!