ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ 
ವಾಣಿಜ್ಯ

ಇಪಿಎಫ್ ಬಡ್ಡಿದರ ಶೇ.8.7ರಿಂದ ಶೇ.8.8ಕ್ಕೆ ಏರಿಕೆ

ಕಾರ್ಮಿಕ ಸಂಘಟನೆಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ಕಡೆಗೂ ನೌಕರರ ಭವಿಷ್ಯನಿಧಿ(ಇಪಿಎಫ್) ಠೇವಣಿಯ ಬಡ್ಡಿದರವನ್ನು ಶೇ.8.7ರಿಂದ 8.8ಕ್ಕೆ ಏರಿಕೆ...

ನವದೆಹಲಿ: ಕಾರ್ಮಿಕ ಸಂಘಟನೆಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ಕಡೆಗೂ ನೌಕರರ ಭವಿಷ್ಯನಿಧಿ(ಇಪಿಎಫ್) ಠೇವಣಿಯ ಬಡ್ಡಿದರವನ್ನು ಶೇ.8.7ರಿಂದ 8.8ಕ್ಕೆ ಏರಿಕೆ ಮಾಡಲು ನಿರ್ಧರಿಸಿದೆ.
ಇತ್ತಿಚೀಗಷ್ಟೆ ಇಪಿಎಫ್ ಬಡ್ಡಿದರವನ್ನು 2015–16ನೆ ಸಾಲಿಗೆ ಶೇ 8.7ರಷ್ಟು ನಿಗದಿ ಮಾಡಿ ಕೇಂದ್ರ ಹಣಕಾಸು ಸಚಿವಾಲಯ ಆದೇಶ ಹೊರಡಿಸಿತ್ತು. ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕಾರ್ಮಿಕ ಸಂಘಟನೆಗಳು ಇಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದವು.
ಈ ವಿಷಯದ ಕುರಿತು ಹಣಕಾಸು ಸಚಿವ ಅರುಣ್‌ ಜೇಟ್ಲಿ ಜತೆ ಚರ್ಚಿಸುವುದಾಗಿ ಭರವಸೆ ನೀಡಿದ್ದ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಅವರು, ಶೇ 8.8ರಷ್ಟು ಬಡ್ಡಿದರವನ್ನು ಏಕೆ ನಿಗದಿಮಾಡಬೇಕು ಎನ್ನುವುದಕ್ಕೆ ಎಲ್ಲಾ ರೀತಿಯ ಸಮರ್ಥನೆಯನ್ನೂ ಹಣಕಾಸು ಸಚಿವಾಲಯಕ್ಕೆ ಕೊಡುವುದಾಗಿ ಹೇಳಿದ್ದರು.
ಇಪಿಎಫ್ ಬಡ್ಡಿದರವರನ್ನು ಶೇ 8.8ಕ್ಕೆ ಏರಿಕೆ ಮಾಡುವಂತೆ ಇಪಿಎಫ್‌ಒ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಆದರೆ ಶೇ.8.8 ಬಡ್ಡಿದರ ನೀಡಲೂ ಸಾಧ್ಯವಿಲ್ಲ ಹಣಕಾಸು ಸಚಿವಾಲಯ ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT