ವಾಣಿಜ್ಯ

ರಾಜ್ಯಾದ್ಯಂತ ಈಎಸ್ಐ ಯೋಜನೆ ವಿಸ್ತರಣೆ

ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಈಎಸ್ಐ ಯೋಜನೆಯನ್ನು ರಾಜ್ಯದ ಇನ್ನೂ 4 ಜಿಲ್ಲೆಗಳಲ್ಲಿ ಪೂರ್ಣವಾಗಿ ಜಾರಿ ಮಾಡಿದೆ.

ಬೆಂಗಳೂರು: ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಈಎಸ್ಐ ಯೋಜನೆಯನ್ನು ರಾಜ್ಯದ ಇನ್ನೂ 4 ಜಿಲ್ಲೆಗಳಲ್ಲಿ ಪೂರ್ಣವಾಗಿ ಜಾರಿ ಮಾಡಿದೆ. ಇದರಿಂದಾಗಿ ಯೋಜನೆಯನ್ನು ಕರ್ನಾಟಕ ರಾಜ್ಯಾದ್ಯಂತ ವಿಸ್ತರಿಸಿರುವುದಾಗಿ ಈಎಸ್ಐ ಪ್ರಾದೇಶಿಕ ಕಚೇರಿಯ ಪ್ರಕಟಣೆ ತಿಳಿಸಿದೆ.

ಈಎಸ್ಐಸಿ 2.0 ಸುಧಾರಣಾ ಪ್ರಕ್ರಿಯೆ ಅಂಗವಾಗಿ ಈ ಮುಂಚೆ ರಾಜ್ಯದ 26 ಜಿಲ್ಲೆಗಳಲ್ಲಿ ದಿನಾಂಕ 01-05-2016 ರಿಂದ ಜಾರಿಗೆ ಬರುವಂತೆ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಈಗ ರಾಜ್ಯದ ಬೀದರ್, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ದಿನಾಂಕ 01-09-2016 ರಿಂದ ಅನ್ವಯವಾಗುವಂತೆ ಅನುಷ್ಠಾನಗೊಳಿಸಲಾಗಿದೆ ಎಂದು ಈಎಸ್ಐ ಪ್ರಾದೇಶಿಕ ನಿರ್ದೇಶಕ ಜೆ.ಹೆಚ್. ನಾಯಕ್ ಹೇಳಿದ್ದಾರೆ.

ಎಲ್ಲಾ ಉದ್ಯೋಗದಾತರು ಆನ್ ಲೈನ್ ಮೂಲಕ www.esic.in ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಬೇಕು. ರಿಜಿಸ್ಟರ್ ಮಾಡಿದ ಮೊದಲ ದಿನದಿಂದ ಉದ್ಯೋಗಿಗಳು ಕೆಲವೊಂದು ಪ್ರಯೋಜನಗಳನ್ನು ಪಡದುಕೊಳ್ಳಲು ಅರ್ಹರಾಗುತ್ತಾರೆ ಎಂದು ನಿಗಮ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT