ಅರುಣ್ ಜೇಟ್ಲಿ 
ವಾಣಿಜ್ಯ

ನಗದು ಬಿಕ್ಕಟ್ಟು, ಡಿಸೆಂಬರ್ 30ರ ನಂತರವೇ ಸಹಜ ಸ್ಥಿತಿಗೆ: ಅರುಣ್ ಜೇಟ್ಲಿ

500 ಹಾಗೂ 1000 ರುಪಾಯಿ ನೋಟ್ ನಿಷೇಧದಿಂದ ಉಂಟಾಗಿರುವ ನಗದು ಸಮಸ್ಯೆ ಇನ್ನೂ ಕೆಲವು ದಿನ ಮುಂದುವರೆಯಲಿದೆ ಎಂದು...

ನವದೆಹಲಿ: 500 ಹಾಗೂ 1000 ರುಪಾಯಿ ನೋಟ್ ನಿಷೇಧದಿಂದ ಉಂಟಾಗಿರುವ ನಗದು ಸಮಸ್ಯೆ ಇನ್ನೂ ಕೆಲವು ದಿನ ಮುಂದುವರೆಯಲಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಶುಕ್ರವಾರ ಹೇಳಿದ್ದಾರೆ.
ಜೇಟ್ಲಿಯ ಪ್ರಕಾರ, ಡಿಸೆಂಬರ್ 30ರ ನಂತರವೇ ನಗದು ಬಿಕ್ಕಟ್ಟು ಸಹಜ ಸ್ಥಿತಿಗೆ ಬರಲಿದೆ ಮತ್ತು ನೋಟ್ ನಿಷೇಧ ಮುಂದಿನ ತ್ರೈಮಾಸಿಕದಲ್ಲಿ ಆರ್ಥಿಕ ಬೆಳವಣಿಗೆಗೆ ಅಡ್ಡಿಯಾಗುವ ಸಾಧ್ಯತೆಯೂ ಇದೆ ಎಂದು ಹೇಳಿದ್ದಾರೆ.
ಆದಾಗ್ಯೂ, ಒಂದು ಬಾರಿ ನಗದು ಬಿಕ್ಕಟ್ಟು ಪರಿಹಾರವಾದರೆ ನೋಟ್ ನಿಷೇಧದಿಂದ ಮತ್ತು ಜಿಎಸ್ ಟಿ ಜಾರಿಯಿಂದ ಭಾರಿ ಪ್ರಮಾಣದಲ್ಲಿ ಲಾಭವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜೇಟ್ಲಿ, ಈಗ ಉಂಟಾಗಿರುವ ನಗದು ಬಿಕ್ಕಟ್ಟು ಕೇವಲ ತಾತ್ಕಾಲಿಕ. ಇದರಿಂದ ಒಂದು ಅಥವಾ ಎರಡು ತ್ರೈಮಾಸಿಕದ ಮೇಲೆ ಪರಿಣಾಮವಾಗಬಹುದು. ಆದರೆ ಮುಂದಿನ 12-15 ತ್ರೈಮಾಸಿಕಕ್ಕೆ ಲಾಭವಾಗಲಿದೆ ಎಂದರು.
ಇದೇ ವೇಳೆ ಮುಂದಿನ ವರ್ಷದ ಸೆಪ್ಟೆಂಬರ್ 16ಕ್ಕೂ ಮುನ್ನವೇ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಕಾಯ್ದೆಯನ್ನು ಸಂವಿಧಾನದ ಪ್ರಕಾರ ಕಡ್ಡಾಯವಾಗಿ ಜಾರಿಗೊಳಿಸಲಾಗುವುದು. ತೆರಿಗೆ ಸಂಗ್ರಹಿಸದೇ ದೇಶ ನಡೆಸುವುದು ಅಸಾಧ್ಯ ಎಂದು ಹಣಕಾಸು ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT