ಅರುಣ್ ಜೇಟ್ಲಿ 
ವಾಣಿಜ್ಯ

ನಗದು ಬಿಕ್ಕಟ್ಟು, ಡಿಸೆಂಬರ್ 30ರ ನಂತರವೇ ಸಹಜ ಸ್ಥಿತಿಗೆ: ಅರುಣ್ ಜೇಟ್ಲಿ

500 ಹಾಗೂ 1000 ರುಪಾಯಿ ನೋಟ್ ನಿಷೇಧದಿಂದ ಉಂಟಾಗಿರುವ ನಗದು ಸಮಸ್ಯೆ ಇನ್ನೂ ಕೆಲವು ದಿನ ಮುಂದುವರೆಯಲಿದೆ ಎಂದು...

ನವದೆಹಲಿ: 500 ಹಾಗೂ 1000 ರುಪಾಯಿ ನೋಟ್ ನಿಷೇಧದಿಂದ ಉಂಟಾಗಿರುವ ನಗದು ಸಮಸ್ಯೆ ಇನ್ನೂ ಕೆಲವು ದಿನ ಮುಂದುವರೆಯಲಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಶುಕ್ರವಾರ ಹೇಳಿದ್ದಾರೆ.
ಜೇಟ್ಲಿಯ ಪ್ರಕಾರ, ಡಿಸೆಂಬರ್ 30ರ ನಂತರವೇ ನಗದು ಬಿಕ್ಕಟ್ಟು ಸಹಜ ಸ್ಥಿತಿಗೆ ಬರಲಿದೆ ಮತ್ತು ನೋಟ್ ನಿಷೇಧ ಮುಂದಿನ ತ್ರೈಮಾಸಿಕದಲ್ಲಿ ಆರ್ಥಿಕ ಬೆಳವಣಿಗೆಗೆ ಅಡ್ಡಿಯಾಗುವ ಸಾಧ್ಯತೆಯೂ ಇದೆ ಎಂದು ಹೇಳಿದ್ದಾರೆ.
ಆದಾಗ್ಯೂ, ಒಂದು ಬಾರಿ ನಗದು ಬಿಕ್ಕಟ್ಟು ಪರಿಹಾರವಾದರೆ ನೋಟ್ ನಿಷೇಧದಿಂದ ಮತ್ತು ಜಿಎಸ್ ಟಿ ಜಾರಿಯಿಂದ ಭಾರಿ ಪ್ರಮಾಣದಲ್ಲಿ ಲಾಭವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜೇಟ್ಲಿ, ಈಗ ಉಂಟಾಗಿರುವ ನಗದು ಬಿಕ್ಕಟ್ಟು ಕೇವಲ ತಾತ್ಕಾಲಿಕ. ಇದರಿಂದ ಒಂದು ಅಥವಾ ಎರಡು ತ್ರೈಮಾಸಿಕದ ಮೇಲೆ ಪರಿಣಾಮವಾಗಬಹುದು. ಆದರೆ ಮುಂದಿನ 12-15 ತ್ರೈಮಾಸಿಕಕ್ಕೆ ಲಾಭವಾಗಲಿದೆ ಎಂದರು.
ಇದೇ ವೇಳೆ ಮುಂದಿನ ವರ್ಷದ ಸೆಪ್ಟೆಂಬರ್ 16ಕ್ಕೂ ಮುನ್ನವೇ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಕಾಯ್ದೆಯನ್ನು ಸಂವಿಧಾನದ ಪ್ರಕಾರ ಕಡ್ಡಾಯವಾಗಿ ಜಾರಿಗೊಳಿಸಲಾಗುವುದು. ತೆರಿಗೆ ಸಂಗ್ರಹಿಸದೇ ದೇಶ ನಡೆಸುವುದು ಅಸಾಧ್ಯ ಎಂದು ಹಣಕಾಸು ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT