ಅರುಣ್ ಜೇಟ್ಲಿ 
ವಾಣಿಜ್ಯ

ನಗದು ಬಿಕ್ಕಟ್ಟು, ಡಿಸೆಂಬರ್ 30ರ ನಂತರವೇ ಸಹಜ ಸ್ಥಿತಿಗೆ: ಅರುಣ್ ಜೇಟ್ಲಿ

500 ಹಾಗೂ 1000 ರುಪಾಯಿ ನೋಟ್ ನಿಷೇಧದಿಂದ ಉಂಟಾಗಿರುವ ನಗದು ಸಮಸ್ಯೆ ಇನ್ನೂ ಕೆಲವು ದಿನ ಮುಂದುವರೆಯಲಿದೆ ಎಂದು...

ನವದೆಹಲಿ: 500 ಹಾಗೂ 1000 ರುಪಾಯಿ ನೋಟ್ ನಿಷೇಧದಿಂದ ಉಂಟಾಗಿರುವ ನಗದು ಸಮಸ್ಯೆ ಇನ್ನೂ ಕೆಲವು ದಿನ ಮುಂದುವರೆಯಲಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಶುಕ್ರವಾರ ಹೇಳಿದ್ದಾರೆ.
ಜೇಟ್ಲಿಯ ಪ್ರಕಾರ, ಡಿಸೆಂಬರ್ 30ರ ನಂತರವೇ ನಗದು ಬಿಕ್ಕಟ್ಟು ಸಹಜ ಸ್ಥಿತಿಗೆ ಬರಲಿದೆ ಮತ್ತು ನೋಟ್ ನಿಷೇಧ ಮುಂದಿನ ತ್ರೈಮಾಸಿಕದಲ್ಲಿ ಆರ್ಥಿಕ ಬೆಳವಣಿಗೆಗೆ ಅಡ್ಡಿಯಾಗುವ ಸಾಧ್ಯತೆಯೂ ಇದೆ ಎಂದು ಹೇಳಿದ್ದಾರೆ.
ಆದಾಗ್ಯೂ, ಒಂದು ಬಾರಿ ನಗದು ಬಿಕ್ಕಟ್ಟು ಪರಿಹಾರವಾದರೆ ನೋಟ್ ನಿಷೇಧದಿಂದ ಮತ್ತು ಜಿಎಸ್ ಟಿ ಜಾರಿಯಿಂದ ಭಾರಿ ಪ್ರಮಾಣದಲ್ಲಿ ಲಾಭವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜೇಟ್ಲಿ, ಈಗ ಉಂಟಾಗಿರುವ ನಗದು ಬಿಕ್ಕಟ್ಟು ಕೇವಲ ತಾತ್ಕಾಲಿಕ. ಇದರಿಂದ ಒಂದು ಅಥವಾ ಎರಡು ತ್ರೈಮಾಸಿಕದ ಮೇಲೆ ಪರಿಣಾಮವಾಗಬಹುದು. ಆದರೆ ಮುಂದಿನ 12-15 ತ್ರೈಮಾಸಿಕಕ್ಕೆ ಲಾಭವಾಗಲಿದೆ ಎಂದರು.
ಇದೇ ವೇಳೆ ಮುಂದಿನ ವರ್ಷದ ಸೆಪ್ಟೆಂಬರ್ 16ಕ್ಕೂ ಮುನ್ನವೇ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಕಾಯ್ದೆಯನ್ನು ಸಂವಿಧಾನದ ಪ್ರಕಾರ ಕಡ್ಡಾಯವಾಗಿ ಜಾರಿಗೊಳಿಸಲಾಗುವುದು. ತೆರಿಗೆ ಸಂಗ್ರಹಿಸದೇ ದೇಶ ನಡೆಸುವುದು ಅಸಾಧ್ಯ ಎಂದು ಹಣಕಾಸು ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?