ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ 
ವಾಣಿಜ್ಯ

ನೂತನ ವಿತ್ತ ನೀತಿ: ಆರ್'ಬಿಐ ನಿರ್ಧಾರವನ್ನು ಪ್ರಶಂಸಿಸಿದ ಅರವಿಂದ ಸುಬ್ರಮಣಿಯನ್

ರೆಪೋ ದರದರಲ್ಲಿ ಯಾವುದೇ ಬದಲಾವಣೆ ಮಾಡದೆ ನೂತನ ಹಣಕಾಸು ನೀತಿಯನ್ನು ಪ್ರಕರಟಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್ ನ ನಿರ್ಧಾರವನ್ನು ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ಅವರು ಬುಧವಾರ ಪ್ರಶಂಸಿಸಿದ್ದಾರೆ...

ನವದೆಹಲಿ: ರೆಪೋ ದರದರಲ್ಲಿ ಯಾವುದೇ ಬದಲಾವಣೆ ಮಾಡದೆ ನೂತನ ಹಣಕಾಸು ನೀತಿಯನ್ನು ಪ್ರಕರಟಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್ ನ ನಿರ್ಧಾರವನ್ನು ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ಅವರು ಬುಧವಾರ ಪ್ರಶಂಸಿಸಿದ್ದಾರೆ.

ನೂತನ ಹಣಕಾಸು ನೀತಿಯನ್ನು ಪ್ರಕಟಿಸಿದ್ದ ಆರ್ ಬಿಐ ರೆಪೋ ದರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಹೇಳಿತ್ತು. ಪ್ರಸ್ತುತ ರೆಪೋ ದರ ಶೇ.6.25ರಷ್ಟಿದ್ದು ಇದರಲ್ಲಿ ಬದಲಾವಣೆ ಮಾಡಿಲ್ಲ ಎಂದು ನೂತನ ಆರ್ ಬಿಐ ಗವರ್ನರ್ ಉರ್ಜಿತ್ ಪಟೇಲ್ ಹೇಳಿದ್ದರು.

ಆರ್ ಬಿಐ ನಿರ್ಧಾರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅರವಿಂದ ಸುಬ್ರಮಣಿಯನ್ ಅವರು, ಸರಿಯಾದ ಸಮಯಕ್ಕೆ ಆರ್ ಬಿಐ ಸರಿಯಾದ ಹಾಗೂ ಉತ್ತಮ ನಿರ್ಧಾರವನ್ನು ತೆಗೆದುಕೊಂಡಿದೆ.

ಹಿಂದಿನ ದಿನಗಳಿಗಿಂತಲೂ ಪ್ರಸ್ತುತ ಪರಿಸ್ಥಿತಿ ಬದಲಾಗಿದ್ದು, ವಿದೇಶಿ ವಿನಿಮಯ ಮಾರುಕಟ್ಟೆಯ ಪರಿಸ್ಥಿತಿ ಸ್ಥಿರವಾಗಿದೆ ಎಂಬುದನ್ನು ತೋರಿಸಬೇಕಾಗಿದೆ. ಪ್ರಸ್ತುತ ಸಮಸ್ಯೆಗಳು ಎದುರಾಗಬಹುದು ಆದರೆ, ಮುಂದಿನ ದಿನಗಳಲ್ಲಿ ಮಾರುಕಟ್ಟೆ ಪರಿಸ್ಥಿತಿ ಸುಧಾರಿಸಲಿದೆ. ದೇಶದ ಬೆಳವಣಿಗೆ ಹಾಗೂ ಅಭಿವೃದ್ಧಿಯ ಪರಿಣಾಮಗಳು ಮುಂದಿನ ದಿನಗಳಲ್ಲಿ ಕಂಡುಬರಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT