ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ 
ವಾಣಿಜ್ಯ

ನೂತನ ವಿತ್ತ ನೀತಿ: ಆರ್'ಬಿಐ ನಿರ್ಧಾರವನ್ನು ಪ್ರಶಂಸಿಸಿದ ಅರವಿಂದ ಸುಬ್ರಮಣಿಯನ್

ರೆಪೋ ದರದರಲ್ಲಿ ಯಾವುದೇ ಬದಲಾವಣೆ ಮಾಡದೆ ನೂತನ ಹಣಕಾಸು ನೀತಿಯನ್ನು ಪ್ರಕರಟಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್ ನ ನಿರ್ಧಾರವನ್ನು ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ಅವರು ಬುಧವಾರ ಪ್ರಶಂಸಿಸಿದ್ದಾರೆ...

ನವದೆಹಲಿ: ರೆಪೋ ದರದರಲ್ಲಿ ಯಾವುದೇ ಬದಲಾವಣೆ ಮಾಡದೆ ನೂತನ ಹಣಕಾಸು ನೀತಿಯನ್ನು ಪ್ರಕರಟಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್ ನ ನಿರ್ಧಾರವನ್ನು ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ಅವರು ಬುಧವಾರ ಪ್ರಶಂಸಿಸಿದ್ದಾರೆ.

ನೂತನ ಹಣಕಾಸು ನೀತಿಯನ್ನು ಪ್ರಕಟಿಸಿದ್ದ ಆರ್ ಬಿಐ ರೆಪೋ ದರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಹೇಳಿತ್ತು. ಪ್ರಸ್ತುತ ರೆಪೋ ದರ ಶೇ.6.25ರಷ್ಟಿದ್ದು ಇದರಲ್ಲಿ ಬದಲಾವಣೆ ಮಾಡಿಲ್ಲ ಎಂದು ನೂತನ ಆರ್ ಬಿಐ ಗವರ್ನರ್ ಉರ್ಜಿತ್ ಪಟೇಲ್ ಹೇಳಿದ್ದರು.

ಆರ್ ಬಿಐ ನಿರ್ಧಾರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅರವಿಂದ ಸುಬ್ರಮಣಿಯನ್ ಅವರು, ಸರಿಯಾದ ಸಮಯಕ್ಕೆ ಆರ್ ಬಿಐ ಸರಿಯಾದ ಹಾಗೂ ಉತ್ತಮ ನಿರ್ಧಾರವನ್ನು ತೆಗೆದುಕೊಂಡಿದೆ.

ಹಿಂದಿನ ದಿನಗಳಿಗಿಂತಲೂ ಪ್ರಸ್ತುತ ಪರಿಸ್ಥಿತಿ ಬದಲಾಗಿದ್ದು, ವಿದೇಶಿ ವಿನಿಮಯ ಮಾರುಕಟ್ಟೆಯ ಪರಿಸ್ಥಿತಿ ಸ್ಥಿರವಾಗಿದೆ ಎಂಬುದನ್ನು ತೋರಿಸಬೇಕಾಗಿದೆ. ಪ್ರಸ್ತುತ ಸಮಸ್ಯೆಗಳು ಎದುರಾಗಬಹುದು ಆದರೆ, ಮುಂದಿನ ದಿನಗಳಲ್ಲಿ ಮಾರುಕಟ್ಟೆ ಪರಿಸ್ಥಿತಿ ಸುಧಾರಿಸಲಿದೆ. ದೇಶದ ಬೆಳವಣಿಗೆ ಹಾಗೂ ಅಭಿವೃದ್ಧಿಯ ಪರಿಣಾಮಗಳು ಮುಂದಿನ ದಿನಗಳಲ್ಲಿ ಕಂಡುಬರಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT