ಸಂಗ್ರಹ ಚಿತ್ರ 
ವಾಣಿಜ್ಯ

ನಗದು ರಹಿತ ಪೆಟ್ರೋಲ್, ಡೀಸಲ್ ಖರೀದಿಗೆ ಇಂದಿನಿಂದ ರಿಯಾಯಿತಿ!

ನಗದು ರಹಿತ ವಹಿವಾಟು ಉತ್ತೇಜನಕ್ಕೆ ಕೇಂದ್ರ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು, ಈ ಪೈಕಿ ನಗದು ರಹಿತವಾಗಿ ಪೆಟ್ರೋಲ್ ಖರೀದಿ ಮಾಡಿದರೆ ರಿಯಾಯಿತಿ ನೀಡುವ ನೂತನ ಸೇವೆಗಳು ಮಂಗಳವಾರದಿಂದಲೇ ಜಾರಿಯಾಗಲಿವೆ ಎಂದು ತಿಳಿದುಬಂದಿದೆ.

ನವದೆಹಲಿ: ನಗದು ರಹಿತ ವಹಿವಾಟು ಉತ್ತೇಜನಕ್ಕೆ ಕೇಂದ್ರ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು, ಈ ಪೈಕಿ ನಗದು ರಹಿತವಾಗಿ ಪೆಟ್ರೋಲ್ ಖರೀದಿ ಮಾಡಿದರೆ ರಿಯಾಯಿತಿ ನೀಡುವ ನೂತನ ಸೇವೆಗಳು  ಮಂಗಳವಾರದಿಂದಲೇ ಜಾರಿಯಾಗಲಿವೆ ಎಂದು ತಿಳಿದುಬಂದಿದೆ.

ಈ ಹಿಂದೆ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದಂತೆ ನಗದು ರಹಿತವಾಗಿ ಅಂದರೆ ಕಾರ್ಡ್ ಅಥವಾ ಮೊಬೈಲ್/ನೆಟ್ ಬ್ಯಾಂಕಿಂಗ್ ಮೂಲಕ ಪಾವತಿ ಮಾಡಿದರೆ 0.75ರಷ್ಟು ರಿಯಾಯಿತಿ ದೊರೆಯಲಿದೆ. ಈ ನೂತನ  ಯೋಜನೆಯನ್ನು ಇಂದಿನಿಂದಲೇ ಜಾರಿಗೊಳಿಸಲಾಗುತ್ತಿದ್ದು, ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಂಸ್ಥೆ ಇಂದಿನಿಂದಲೇ ಜಾರಿಗೊಳಿಸುತ್ತಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಐಒಸಿ, "ನಗದು ರಹಿತವಾಗಿ ಪೆಟ್ರೋಲ್ ಖರೀದಿ ಮಾಡುವ ಗ್ರಾಹಕರ ಖಾತೆಗೆ ನೇರವಾಗಿ ರಿಯಾಯಿತಿ ಹಣವನ್ನು 3 ದಿನಗಳಲ್ಲಿ ಹಿಂದಿರುಗಿಸಲಾಗುತ್ತದೆ ಎಂದು ಹೇಳಿದೆ.ಅದರಂತೆ  ಪ್ರತೀಲಿಟರ್ ಪೆಟ್ರೋಲ್ ಖರೀದಿ ಮೇಲೆ ಸುಮಾರು 40 ರಿಂದ 45 ಪೈಸೆಯಷ್ಟು ಉಳಿತಾಯವಾಗಲಿದ್ದು, ಈ ಹಣವನ್ನು ಐಒಸಿ ನೇರವಾಗಿ ಗ್ರಾಹಕನ ಬ್ಯಾಂಕ್ ಖಾತೆಗೆ ರವಾನೆ ಮಾಡುತ್ತದೆ. ಪೆಟ್ರೋಲ್ ಮಾತ್ರವಲ್ಲದೇ ಡೀಸೆಲ್  ಖರೀದಿ ಮೇಲಿನಿ ರಿಯಾಯಿತಿ ಹಣವನ್ನು ಕೂಡ ಇದೇ ರೀತಿ ಗ್ರಾಹಕಣ ಖಾತೆಗೆ ವರ್ಗಾಯಿಸಲಾಗುತ್ತದೆ ಎಂದು ಸಂಸ್ಥೆ ಹೇಳಿದೆ.

ಕಳೆದ ವಾರವಷ್ಟೇ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ನಗದ ರಹಿತ ವಹಿವಾಟು ಉತ್ತೇಜನಕ್ಕೆ 10 ಅಂಶಗಳ ಪ್ರೋತ್ಸಾಹಕ ಯೋಜನೆಗಳನ್ನು ಘೋಷಣೆ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!