ಆಧಾರ್ 
ವಾಣಿಜ್ಯ

ಸರಳವಾದ ಡಿಜಿಟಲ್ ವ್ಯವಹಾರಕ್ಕೆ ಆಧಾರ್ ಪೇಮೆಂಟ್ ಆ್ಯಪ್

ಗರಿಷ್ಠ ಮುಖಬೆಲೆಯ ನೋಟು ನಿಷೇಧದ ಬಳಿಕ ಕೇಂದ್ರ ಸರ್ಕಾರ ನಗದು ರಹಿತ ವ್ಯವಹಾರಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಗ್ರಾಹಕರ ಸ್ನೇಹಿ ಆ್ಯಪ್ ಹೊಸ ಬಗೆಯ ಆಧಾರ್...

ನವದೆಹಲಿ: ಗರಿಷ್ಠ ಮುಖಬೆಲೆಯ ನೋಟು ನಿಷೇಧದ ಬಳಿಕ ಕೇಂದ್ರ ಸರ್ಕಾರ ನಗದು ರಹಿತ ವ್ಯವಹಾರಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಗ್ರಾಹಕರ ಸ್ನೇಹಿ ಆ್ಯಪ್ ಹೊಸ ಬಗೆಯ ಆಧಾರ್ ಪೇಮೆಂಟ್ ಆ್ಯಪ್ ಸಜ್ಜುಗೊಳಿಸಿದ್ದು ಡಿಸೆಂಬರ್ 25ರಂದು ಬಿಡುಗಡೆಗೊಳಿಸಲಿದೆ. 
ಐಡಿಎಫ್ಎ ಬ್ಯಾಂಕ್ ಮತ್ತು ಯುಐಡಿಎಐ(ಆಧಾರ್) ಜತೆಗೂಡಿ ಸಿದ್ಧಪಡಿಸಿರುವ ಈ ಆ್ಯಪ್ ಬಳಕೆಗೆ ತುಂಬಾ ಸರಳವಾಗಿದೆ. ಈ ಆ್ಯಪನ್ನು ವ್ಯಾಪಾರಿಗಳು ಮೊತ್ತ ಮೊದಲಾಗಿ ತಮ್ಮ ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಗಳಿಗೆ ಡೌನ್ ಲೋಡ್ ಮಾಡಿಕೊಳ್ಳಬೇಕು. ಇದಕ್ಕೆ ಕೇವಲ 2000 ರು ಬೆಲೆಗೆ ಸಿಗುವ ಬೆರಳಚ್ಚು ಬಯೋಮೆಟ್ರಿಕ್ ಸಾಧನವನ್ನು ಜೋಡಿಸಿಕೊಳ್ಳಬೇಕು. 
ಗ್ರಾಹಕ ತಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ವ್ಯಾಪಾರಿಗೆ ನೀಡಬೇಕು. ಅದನ್ನು ಅವರು ಆ್ಯಪ್ ಗೆ ಫೀಡ್ ಮಾಡುತ್ತಾರೆ. ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಹೊಂದಿರುವ ಗ್ರಾಹಕರ ಬ್ಯಾಂಕ್ ಖಾತೆಯ ಈ ಪಾವತಿ ವ್ಯವಹಾರಕ್ಕೆ ಆ್ಯಪ್ ಮೂಲಕ ಒಳಪಡುತ್ತದೆ. ಆಗ ಗ್ರಾಹಕರು ತಮ್ಮ ಬೆರಳಚ್ಚನ್ನು ಬಯೋಮೆಟ್ರಿಕ್ ಸಾಧನದಲ್ಲಿ ದಾಖಲಿಸಬೇಕು ಇದುವೇ ಪಾಸ್ ವರ್ಡ್ ಆಗಿ ಕೆಲಸ ಮಾಡುತ್ತದೆ. ಆಗ ವ್ಯಾಪಾರಿಗೆ ಗ್ರಾಹಕರ ಬ್ಯಾಂಕ್ ಖಾತೆಯಿಂದ ಹಣ ಪಾವತಿಯಾಗುತ್ತದೆ. 
ಯುಎಐಡಿಎಐ ಸಿಇಓ ಅಜಯ್ ಭೂಷಣ್ ಅವರು ಈ ಸರಳ ವ್ಯವಸ್ಥೆಯಲ್ಲಿ ಡೆಬಿಟ್/ಕ್ರೆಡಿಟ್ ಕಾರ್ಡ್ ಬಳಸುವ ಅವಶ್ಯಕತೆಯಿಲ್ಲ. ಅಲ್ಲದೆ ಕಾರ್ಡ್ ಗಳ ಪಾಸ್ ವರ್ಡ್ ಸೋರಿಕೆಯಾಗುವ ಭಯವಿಲ್ಲ. ಇಲ್ಲಿ ಮತ್ತೊಂದು ಅಂಶ ವೀಸಾ/ಮಾಸ್ಟರ್ ಕಾರ್ಡ್ ಸಂಸ್ಥೆಗಳಿಗೆ ಯಾವುದೇ ಶುಲ್ಕ ಪಾವತಿಯಾಗುವುದಿಲ್ಲ ಎಂದು ಹೇಳಿದ್ದಾರೆ. 
ದೇಶದಾದ್ಯಂತ ಈಗಾಗಲೇ 40 ಕೋಟಿ ಆಧಾರ್ ಕಾರ್ಡ್ ಗಳು ಬ್ಯಾಂಕ್ ಖಾತೆಯೊಂದಿಗೆ ಜೋಡಿಸಲ್ಪಟ್ಟಿದ್ದು 2017ರ ಮಾರ್ಚ್ ಒಳಗೆ ಎಲ್ಲ ಆಧಾರ್ ಕಾರ್ಡ್ ಗಳನ್ನು ಬ್ಯಾಂಕ್ ಖಾತೆಗೆ ಜೋಡಿಸುವ ಗುರಿ ಹೊಂದಲಾಗಿದೆ ಎಂದು ಅಜಯ್ ಭೂಷಣ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT