ಆರ್​ಬಿಐ ಗೌರ್ನರ್ ರಘುರಾಮ್ ರಾಜನ್ 
ವಾಣಿಜ್ಯ

ಆರ್ ಬಿ ಐ ಹಣಕಾಸು ನೀತಿ ಪ್ರಕಟ: ಬಡ್ಡಿದರದಲ್ಲಿ ಬದಲಾವಣೆ ಇಲ್ಲ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ(ಆರ್​ಬಿಐ) ದ್ವೈಮಾಸಿಕ ಹಣಕಾಸು ನೀತಿ ಪ್ರಕಟವಾಗಿದ್ದು ಈ ಬಾರಿಯ ಹಣಕಾಸು ನೀತಿಯಲ್ಲಿ ಬಡ್ಡಿ ದರದಲ್ಲಿ ಬದಲಾವಣೆ ಮಾಡಲಾಗಿಲ್ಲ.

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ(ಆರ್​ಬಿಐ) ದ್ವೈಮಾಸಿಕ ಹಣಕಾಸು ನೀತಿ ಪ್ರಕಟವಾಗಿದ್ದು  ಈ ಬಾರಿಯ ಹಣಕಾಸು ನೀತಿಯಲ್ಲಿ ಬಡ್ಡಿ ದರದಲ್ಲಿ ಬದಲಾವಣೆ ಮಾಡಲಾಗಿಲ್ಲ.
ಹಣದುಬ್ಬರ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಈ ಬಾರಿ ಬಡ್ಡಿ ದರ ಕಡಿತಗೊಳಿಸಲಾಗಿಲ್ಲ. 2016-17ನೇ ಸಾಲಿನ ಬಜೆಟ್ ಈ ತಿಂಗಳು ಮಂಡನೆಯಾಗಲಿದೆ. ವಿತ್ತೀಯ ಕೊರತೆ, ಹಣದುಬ್ಬರ ಮತ್ತಿತರ ವಿಚಾರಗಳಿಗೆ ಸಂಬಂಧಿಸಿ ಸರ್ಕಾರ ಬಜೆಟ್​ನಲ್ಲಿ ಏನು ಕ್ರಮ ಕೈಗೊಳ್ಳಲಿದೆ ಎಂಬುದನ್ನು ಆರ್​ಬಿಐ ಕಾದು ನೋಡಲಿದ್ದು ಬಜೆಟ್ ನ್ನು ಆಧರಿಸಿ ಮುಂದಿನ ಹಣಕಾಸು ನೀತಿಯಲ್ಲಿ ಬಡ್ಡಿ ದರ ಕಡಿತಗೊಳಿಸುವ ಬಗ್ಗೆ ಆರ್ ಬಿಐ ನಿರ್ಧಾರ ಕೈಗೊಳ್ಳಲಿದೆ. 
ಮುಕ್ತ ಮಾರುಕಟ್ಟೆ ಕಾರ್ಯಾಚರಣೆ ಸೇರಿದಂತೆ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಬಂಡವಾಳ ಹರಿದು ಬರಲು ನೆರವಾಗುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹಣಕಾಸು ನೀತಿ ಪ್ರಕಟಿಸಿದ ರಘುರಾಮ್ ರಾಜನ್ ಹೇಳಿದ್ದಾರೆ. ಬ್ಯಾಂಕಿಂಗ್ ವ್ಯವಸ್ಥೆ ಬಂಡವಾಳ ಕೊರತೆ ಎದುರಿಸುತ್ತಿದೆ ಎಂಬುದು ವಾಸ್ತವವಲ್ಲ ಎಂದು ಆರ್​ಬಿಐ ಗೌರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT