ಜಯಂತ್ ಸಿನ್ಹಾ 
ವಾಣಿಜ್ಯ

ನೌಕರರ ಭವಿಷ್ಯ ನಿಧಿ ತೆರಿಗೆ; ಸಂದೇಹಗಳಿಗೆ ಸ್ಪಷ್ಟೀಕರಣ ಶೀಘ್ರದಲ್ಲೆ: ವಿತ್ತ ಸಚಿವಾಲಯ

ನೌಕರರ ಭವಿಷ್ಯ ನಿಧಿ (ಇಪಿಎಫ್) ಹಣ ಹಿಂಪಡೆಯಲು ನಿರ್ಧರಿಸಿದರೆ, ಆ ಪೈಕಿ ಶೇ.60 ರಷ್ಟು ಮೊತ್ತಕ್ಕೆ ತೆರಿಗೆ ಕಟ್ಟಬೇಕು. ಏಪ್ರಿಲ್ 1 ರಿಂದ ಇಪಿಎಫ್ ಕಟ್ಟುವ...

ನವದೆಹಲಿ: ನೌಕರರ ಭವಿಷ್ಯ ನಿಧಿ (ಇಪಿಎಫ್) ಹಣ ಹಿಂಪಡೆಯಲು ನಿರ್ಧರಿಸಿದರೆ, ಆ ಪೈಕಿ ಶೇ.60 ರಷ್ಟು ಮೊತ್ತಕ್ಕೆ ತೆರಿಗೆ ಕಟ್ಟಬೇಕು. ಏಪ್ರಿಲ್ 1 ರಿಂದ ಇಪಿಎಫ್ ಕಟ್ಟುವ ಹಣಕ್ಕೆ ಇದು ಅನ್ವಯವಾಗುತ್ತದೆ ಎಂದು ಕೇಂದ್ರ ಸರ್ಕಾರ ಸೋಮವಾರ ಮಂಡಿಸಿದ ಬಜೆಟ್ ನಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದರು. ಸರ್ಕಾರದ ಈ ನಿರ್ಧಾರಕ್ಕೆ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಜನರ ಸಂದೇಹಗಳಿಗೆ ಸ್ಪಷ್ಟವಾದ ವಿವರಣೆಯನ್ನು ಶೀಘ್ರವೇ ನೀಡುತ್ತೇವೆ ಎಂದು ಕೇಂದ್ರ ವಿತ್ತ ಸಚಿವಾಲಯದ ರಾಜ್ಯ ಸಚಿವ  ಜಯಂತ್ ಸಿನ್ಹಾ ಮಂಗಳವಾರ ಹೇಳಿದ್ದಾರೆ.
ಸರ್ಕಾರದ ಈ ನಿರ್ಧಾರವು 6 ಕೋಟಿ ಉದ್ಯೋಗಿಗಳಿ ಹೊರೆಯಾಗಿ ಪರಿಣಮಿಸಿದೆ.  ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್ )ಯಲ್ಲಿರುವ ಶೇ. 60ರಷ್ಟು ಮೊತ್ತಕ್ಕೆ ಮಾತ್ರ ತೆರಿಗೆ ವಿಧಿಸಲು ಸರ್ಕಾರ ತೀರ್ಮಾನಿಸಿತ್ತು.
ಈ ಬಗ್ಗೆ ಜನರ ಆತಂಕಗಳ ನಮ್ಮ ಗಮನಕ್ಕೆ ಬಂದಿದೆ. ಈ ಕಾರಣದಿಂದಲೇ ನಾವು ಹೆಚ್ಚಿನ ವಿವರಣೆಗಳನ್ನು ನೀಡಬಯಸಿದ್ದೇವೆ. ಅಗತ್ಯ ಬಂದರೆ ಬಜೆಟ್ ನಿರ್ದೇಶನಗಳಲ್ಲಿ ಬದಲಾವಣೆಯನ್ನೂ ಮಾಡುತ್ತೇವೆ. ಇದರಿಂದಾಗಿ ಸದ್ಯದ ನೌಕರರ ಭವಿಷ್ಯ ನಿಧಿಯನ್ನು ಇದು ಬಾಧಿಸುವುದಿಲ್ಲ ಎಂದು ಎಂದು ಸಿನ್ಹಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

'ವಿಬಿ-ಜಿ-ರಾಮ್' ಕಾಯ್ದೆ ವಿರುದ್ಧ ಕಾನೂನು ಸಮರ: ವಿಶೇಷ ಅಧಿವೇಶನ ಕರೆದು ಚರ್ಚೆ- ಸಿಎಂ ಸಿದ್ದರಾಮಯ್ಯ

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

SCROLL FOR NEXT