ಕಾರ್ಮಿಕ ಕಾರ್ಯದರ್ಶಿ ಶಂಕರ್ ಅಗರ್ವಾಲ್ (ಸಂಗ್ರಹ ಚಿತ್ರ) 
ವಾಣಿಜ್ಯ

ಇಎಸ್ ಐ. ಪಿಎಫ್ ತಪಾಸಣೆ ಮುಕ್ತ

ಸ್ಟಾರ್ಟ್ ಅಪ್ ಗಳನ್ನು ಮೂರು ವರ್ಷ ರಿಟರ್ನ್ಸ್ ಸಲ್ಲಿಕೆಯಿಂದ ವಿನಾಯಿತಿ ನೀಡುವಂತೆ ಕೇಂದ್ರ ಕಾರ್ಮಿಕ ಸಚಿವಾಲಯ ಭವಿಷ್ಯ ನಿಧಿ ಸಂಸ್ಥೆ ಮತ್ತು ಕಾರ್ಮಿಕರ ರಾಜ್ಯ ವಿಮೆ ಸಂಸ್ಥೆಗೆ ನಿರ್ದೇಶನ ನಿಡೀದೆ...

ನವದೆಹಲಿ: ಸ್ಟಾರ್ಟ್ ಅಪ್ ಗಳನ್ನು ಮೂರು ವರ್ಷ ರಿಟರ್ನ್ಸ್ ಸಲ್ಲಿಕೆಯಿಂದ ವಿನಾಯಿತಿ ನೀಡುವಂತೆ ಕೇಂದ್ರ ಕಾರ್ಮಿಕ ಸಚಿವಾಲಯ ಭವಿಷ್ಯ ನಿಧಿ ಸಂಸ್ಥೆ ಮತ್ತು ಕಾರ್ಮಿಕರ ರಾಜ್ಯ ವಿಮೆ  ಸಂಸ್ಥೆಗೆ ನಿರ್ದೇಶನ ನಿಡೀದೆ.

ಸ್ಟಾರ್ಟ್ ಅಪ್ ಗಳ ಪ್ರೋತ್ಸಾಹಕ್ಕೆ ಪ್ರಧಾನಿಳು ಕೈಗೊಂಡ ಕ್ರಮಗಳ ಹಾದಿಯಲ್ಲೇ ಸಾಗಿರುವ ಕೇಂದ್ರ ಕಾರ್ಮಿಕ ಸಚಿವಾಲಯ 9 ಕಾರ್ಮಿಕ ಕಾನೂನುಗಳಿಗೆ ಉದ್ಯಮಿಗಳು ಕೇವಲ ಸ್ವಯಂ  ದೃಢೀಕರಣ ಪತ್ರ ಸಲ್ಲಿಸಿದರೆ ಸಾಕು ಎಂದು ಇತ್ತೀಚೆಗೆ ಬಿಡುಗಡೆ ಮಾಡಿರುವ ನಿರ್ದೇಶನದಲ್ಲಿ ಹೇಳಿದೆ.

ಸ್ಟಾರ್ಟ್ ಅಪ್ ಗಳಿಗೆ ವಿಶೇಷ ಸೌಲಭ್ಯಗಳು ಮತ್ತು ಪ್ರೋತ್ಸಾಹಗಳು ಅಗತ್ಯವಾಗಿದೆ. ಇಂತಹ ಕಂಪನಿಗಳು ಕಾರ್ಮಿಕ ಇಲಾಖೆಗೆ ಸಂಬಂಧಿಸಿದಂತೆ ಸ್ವಯಂ ಪ್ರಮಾಣ ಪತ್ರಗಳನ್ನು  ಸಲ್ಲಿಸಿದರೂ ಸಾಕು ಎಂದು ಕಾರ್ಮಿಕ ಕಾರ್ಯದರ್ಶಿ ಶಂಕರ್ ಅಗರ್ವಾಲ್ ಹೇಳಿದ್ದಾರೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾಯ್ದೆ, ಅಂತಾರಾಜ್ಯ ವಲಸೆ ಕಾರ್ಮಿಕ ಕಾಯ್ದೆ, ವೇತನ ಮತ್ತು ಗ್ರಾಚುಟಿ ಕಾಯ್ದೆ ಗುತ್ತಿಗೆ ಕಾರ್ಮಿಕ ಕಾಯ್ದೆ, ಕೈಗಾರಿಕಾ ವ್ಯಾಜ್ಯಗಳ ಕಾಯ್ದೆ ಸೇರಿದಂತೆ ಹಲವು  ನಿಯಮಗಳು ಅನ್ವಯವಾಗದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT