ಪತಂಜಲಿ ಜಾಹಿರಾತುಗಳು ಜನರನ್ನು ದಾರಿತಪ್ಪಿಸುತ್ತಿವೆ: ಎಎಸ್ ಸಿಐ 
ವಾಣಿಜ್ಯ

ಪತಂಜಲಿ ಜಾಹಿರಾತುಗಳು ಜನರನ್ನು ದಾರಿತಪ್ಪಿಸುತ್ತಿವೆ: ಎಎಸ್ ಸಿಐ

ಜಾಹಿರಾತು ಗುಣಮಟ್ಟವನ್ನು ಪರೀಕ್ಷಿಸುವ ಸಂಸ್ಥೆ ಎಎಸ್ ಸಿಐ, ಬಾಬಾ ರಾಮ್ ದೇವ್ ಅವರ ಪತಂಜಲಿ ಸಂಸ್ಥೆಯ ಜಾಹಿರಾತುಗಳ ಬಗ್ಗೆ ತಕರಾರು ತೆಗೆದಿದ್ದು,...

ನವದೆಹಲಿ: ಜಾಹಿರಾತು ಗುಣಮಟ್ಟವನ್ನು ಪರೀಕ್ಷಿಸುವ ಸಂಸ್ಥೆ ಎಎಸ್ ಸಿಐ, ಬಾಬಾ ರಾಮ್ ದೇವ್ ಅವರ ಪತಂಜಲಿ ಸಂಸ್ಥೆಯ ಜಾಹಿರಾತುಗಳ ಬಗ್ಗೆ ತಕರಾರು ತೆಗೆದಿದ್ದು, ತನಗೆ ಪೈಪೋಟಿ ನೀಡುತ್ತಿರುವ ಸಂಸ್ಥೆಗಳನ್ನು ಹೀಗಳೆಯಲು ಯತ್ನಿಸುತ್ತಿದೆ ಎಂದು ಹೇಳಿದೆ.

ಉಳಿದ ಕಂಪೆನಿಗಳಿಗಿಂತ ತನ್ನ ಕಂಪನಿಯ ಉತ್ಪನ್ನಗಳು ಉತ್ತಮವಾದುದ್ದೆಂದು ಪ್ರಚಾರ ಮಾಡುವ ಭರದಲ್ಲಿ ಪತಂಜಲಿ ಆಯುರ್ವೇದ ತನಗೆ ಪೈಪೋಟಿ ನೀಡುತ್ತಿರುವ ಸಂಸ್ಥೆಗಳನ್ನು ಹೀಗಳೆಯಲು ಯತ್ನಿಸುತ್ತಿರುವುದು ಸೂಕ್ತವಲ್ಲ ಎಂದು ಎಎಸ್ ಸಿಐ ಹೇಳಿದೆ.

ಪತಂಜಲಿ ಉತ್ಪನ್ನಗಳಲ್ಲಿ ಒಂದಾಗಿರುವ ಸಾಸಿವೆ ಎಣ್ಣೆಯ ಜಾಹಿರಾತಿನಲ್ಲಿ ಪತಂಜಲಿ ಸಂಸ್ಥೆ ಬೇರೆಯ ಸಂಸ್ಥೆಗಳು ಮಾರಾಟ ಮಾಡುವ ಸಾಸಿವೆ ಎಣ್ಣೆ ಕಲಬೆರಕೆಯಾಗಿರುತ್ತದೆ ಎಂದು ಜಾಹೀರಾತುಗಳಲ್ಲಿ ಹೇಳಿದೆ. ಆದರೆ ಈ ಅಂಶ ಈವರೆಗೂ ಸಾಬೀತಾಗಿಲ್ಲ. ಅನ್ಯ ಕಂಪನಿಗಳ ಉತ್ಪನ್ನಗಳನ್ನು ಹೀಗಳೆಯುವುದಷ್ಟೇ ಅಲ್ಲದೆ, ಪತಂಜಲಿ ಉತ್ಪನ್ನಗಳು ಜನರನ್ನು ದಾರಿ ತಪ್ಪಿಸುತ್ತಿವೆ ಎಂದು ಎಎಸ್ ಸಿ ಐ ಹೇಳಿದ್ದು, ಪಂತಂಜಲಿ ಸಂಸ್ಥೆಯ ರೀತಿಯಲ್ಲೇ ಹಲವು ಕಂಪನಿಗಳ ಜಾಹಿರಾತುಗಳ ಬಗ್ಗೆ ಬಂದಿರುವ ದೂರುಗಳನ್ನು ಎಎಸ್ ಸಿ ಐ ಪುರಸ್ಕರಿಸಿದೆ.  ಇನ್ನು ಪತಂಜಲಿ ಆಯುರ್ವೇದದ ದಂತ ಕಾಂತಿ ಟೂತ್ ಪೇಸ್ಟ್ ಸಹ ಜನರನ್ನು ದಾರಿ ತಪ್ಪಿಸುತ್ತಿದ್ದು, ಹಲ್ಲಿನ ಸೂಕ್ಶ್ಮತೆ, ವಸಡುಗಳಲ್ಲಿ ರಕ್ತ ಸ್ರಾವವನ್ನು ತಡೆಯುವುದು ಸೇರಿದಂತೆ ಹಲವು ವಿಷಯಗಳಲ್ಲಿ ಸಂಸ್ಥೆ ಹೇಳಿಕೊಂಡಿರುವ ರೀತಿಯಲ್ಲಿ ಪರಿಣಾಮಕಾರಿಯಾಗಿಲ್ಲ ಎಂದು ಎಎಸ್ ಸಿಐ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT