ಪತಂಜಲಿ ಜಾಹಿರಾತುಗಳು ಜನರನ್ನು ದಾರಿತಪ್ಪಿಸುತ್ತಿವೆ: ಎಎಸ್ ಸಿಐ 
ವಾಣಿಜ್ಯ

ಪತಂಜಲಿ ಜಾಹಿರಾತುಗಳು ಜನರನ್ನು ದಾರಿತಪ್ಪಿಸುತ್ತಿವೆ: ಎಎಸ್ ಸಿಐ

ಜಾಹಿರಾತು ಗುಣಮಟ್ಟವನ್ನು ಪರೀಕ್ಷಿಸುವ ಸಂಸ್ಥೆ ಎಎಸ್ ಸಿಐ, ಬಾಬಾ ರಾಮ್ ದೇವ್ ಅವರ ಪತಂಜಲಿ ಸಂಸ್ಥೆಯ ಜಾಹಿರಾತುಗಳ ಬಗ್ಗೆ ತಕರಾರು ತೆಗೆದಿದ್ದು,...

ನವದೆಹಲಿ: ಜಾಹಿರಾತು ಗುಣಮಟ್ಟವನ್ನು ಪರೀಕ್ಷಿಸುವ ಸಂಸ್ಥೆ ಎಎಸ್ ಸಿಐ, ಬಾಬಾ ರಾಮ್ ದೇವ್ ಅವರ ಪತಂಜಲಿ ಸಂಸ್ಥೆಯ ಜಾಹಿರಾತುಗಳ ಬಗ್ಗೆ ತಕರಾರು ತೆಗೆದಿದ್ದು, ತನಗೆ ಪೈಪೋಟಿ ನೀಡುತ್ತಿರುವ ಸಂಸ್ಥೆಗಳನ್ನು ಹೀಗಳೆಯಲು ಯತ್ನಿಸುತ್ತಿದೆ ಎಂದು ಹೇಳಿದೆ.

ಉಳಿದ ಕಂಪೆನಿಗಳಿಗಿಂತ ತನ್ನ ಕಂಪನಿಯ ಉತ್ಪನ್ನಗಳು ಉತ್ತಮವಾದುದ್ದೆಂದು ಪ್ರಚಾರ ಮಾಡುವ ಭರದಲ್ಲಿ ಪತಂಜಲಿ ಆಯುರ್ವೇದ ತನಗೆ ಪೈಪೋಟಿ ನೀಡುತ್ತಿರುವ ಸಂಸ್ಥೆಗಳನ್ನು ಹೀಗಳೆಯಲು ಯತ್ನಿಸುತ್ತಿರುವುದು ಸೂಕ್ತವಲ್ಲ ಎಂದು ಎಎಸ್ ಸಿಐ ಹೇಳಿದೆ.

ಪತಂಜಲಿ ಉತ್ಪನ್ನಗಳಲ್ಲಿ ಒಂದಾಗಿರುವ ಸಾಸಿವೆ ಎಣ್ಣೆಯ ಜಾಹಿರಾತಿನಲ್ಲಿ ಪತಂಜಲಿ ಸಂಸ್ಥೆ ಬೇರೆಯ ಸಂಸ್ಥೆಗಳು ಮಾರಾಟ ಮಾಡುವ ಸಾಸಿವೆ ಎಣ್ಣೆ ಕಲಬೆರಕೆಯಾಗಿರುತ್ತದೆ ಎಂದು ಜಾಹೀರಾತುಗಳಲ್ಲಿ ಹೇಳಿದೆ. ಆದರೆ ಈ ಅಂಶ ಈವರೆಗೂ ಸಾಬೀತಾಗಿಲ್ಲ. ಅನ್ಯ ಕಂಪನಿಗಳ ಉತ್ಪನ್ನಗಳನ್ನು ಹೀಗಳೆಯುವುದಷ್ಟೇ ಅಲ್ಲದೆ, ಪತಂಜಲಿ ಉತ್ಪನ್ನಗಳು ಜನರನ್ನು ದಾರಿ ತಪ್ಪಿಸುತ್ತಿವೆ ಎಂದು ಎಎಸ್ ಸಿ ಐ ಹೇಳಿದ್ದು, ಪಂತಂಜಲಿ ಸಂಸ್ಥೆಯ ರೀತಿಯಲ್ಲೇ ಹಲವು ಕಂಪನಿಗಳ ಜಾಹಿರಾತುಗಳ ಬಗ್ಗೆ ಬಂದಿರುವ ದೂರುಗಳನ್ನು ಎಎಸ್ ಸಿ ಐ ಪುರಸ್ಕರಿಸಿದೆ.  ಇನ್ನು ಪತಂಜಲಿ ಆಯುರ್ವೇದದ ದಂತ ಕಾಂತಿ ಟೂತ್ ಪೇಸ್ಟ್ ಸಹ ಜನರನ್ನು ದಾರಿ ತಪ್ಪಿಸುತ್ತಿದ್ದು, ಹಲ್ಲಿನ ಸೂಕ್ಶ್ಮತೆ, ವಸಡುಗಳಲ್ಲಿ ರಕ್ತ ಸ್ರಾವವನ್ನು ತಡೆಯುವುದು ಸೇರಿದಂತೆ ಹಲವು ವಿಷಯಗಳಲ್ಲಿ ಸಂಸ್ಥೆ ಹೇಳಿಕೊಂಡಿರುವ ರೀತಿಯಲ್ಲಿ ಪರಿಣಾಮಕಾರಿಯಾಗಿಲ್ಲ ಎಂದು ಎಎಸ್ ಸಿಐ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT