ಸಾಂದರ್ಭಿಕ ಚಿತ್ರ 
ವಾಣಿಜ್ಯ

ಸಾರ್ವಜನಿಕ ವಲಯ ಬ್ಯಾಂಕುಗಳಿಗೆ 23 ಸಾವಿರ ಕೋಟಿ ರೂಪಾಯಿ ಸರ್ಕಾರದಿಂದ ನೆರವು

ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ದ್ರವ್ಯತೆ ಹೆಚ್ಚಿಸಲು 13 ಸರ್ಕಾರಿ ಬ್ಯಾಂಕುಗಳಲ್ಲಿ 22 ಸಾವಿರದ 915 ಕೋಟಿ...

ನವದೆಹಲಿ: ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ದ್ರವ್ಯತೆ ಹೆಚ್ಚಿಸಲು 13 ಸರ್ಕಾರಿ ಬ್ಯಾಂಕುಗಳಲ್ಲಿ 22 ಸಾವಿರದ 915 ಕೋಟಿ ರೂಪಾಯಿ ಬಿಡುಗಡೆಮಾಡುವುದಾಗಿ ಕೇಂದ್ರ ಸರ್ಕಾರ ಮಂಗಳವಾರ ಘೋಷಿಸಿದೆ.
ಹಣ ನೀಡಿಕೆಯು ಇಂದ್ರಧನುಷ್ ಯೋಜನೆಯ ಭಾಗವಾಗಿದ್ದು, ಇದರಡಿ ಬ್ಯಾಂಕುಗಳು ನಾಲ್ಕು ವರ್ಷಗಳ ಅವಧಿಗೆ 70 ಸಾವಿರ ಕೋಟಿ ರೂಪಾಯಿ ಪಡೆದುಕೊಳ್ಳಲಿವೆ.
ಹಣದ ಒಳಹರಿವು ಸರ್ಕಾರಕ್ಕೆ ಅಗತ್ಯವಾಗಿದೆ. ಏಕೆಂದರೆ ಭಾರತದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ 120 ಶತಕೋಟಿ ಡಾಲರ್ ಸಾಲ ಮರುಪಾವತಿಯಾಗದೆ ಉಳಿದುಕೊಂಡಿದೆ. ಇದು ದೇಶದ ಅರ್ಥವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ.
ಬ್ಯಾಂಕ್ ಗಳ ಮರುಬಂಡವಾಳೀಕರಣಕ್ಕೆ ಈ ಬಾರಿಯ ಹಣಕಾಸು ವರ್ಷದಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ 25 ಸಾವಿರ ಕೋಟಿ ರೂಪಾಯಿ ಬಜೆಟ್ ನೀಡಿದ್ದರು. ದೇಶದಲ್ಲಿ ಅತ್ಯಂತ ಹೆಚ್ಚು ಸಾಲ ನೀಡುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ 7 ಸಾವಿರದ 575 ಕೋಟಿ ರೂಪಾಯಿ ಸಿಗಲಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 2 ಸಾವಿರದ 816 ಕೋಟಿ ರೂ, ಬ್ಯಾಂಕ್ ಆಫ್ ಇಂಡಿಯಾಗೆ 1 ಸಾವಿರದ 784 ಕೋಟಿ ರೂಪಾಯಿ ಸಿಗಲಿದೆ.
ಹಣದ ಒಳಹರಿವಿನ ಘೋಷಣೆಯಾಗುತ್ತಿದ್ದಂತೆ ಇಂದು ಸಾರ್ವಜನಿಕ ವಲಯ ಬ್ಯಾಂಕ್ ಗಳ ಷೇರುಗಳಲ್ಲಿ ಏರಿಕೆ ಕಂಡುಬಂತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT