ಸಾಂದರ್ಭಿಕ ಚಿತ್ರ 
ವಾಣಿಜ್ಯ

ಸಾರ್ವಜನಿಕ ವಲಯ ಬ್ಯಾಂಕುಗಳಿಗೆ 23 ಸಾವಿರ ಕೋಟಿ ರೂಪಾಯಿ ಸರ್ಕಾರದಿಂದ ನೆರವು

ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ದ್ರವ್ಯತೆ ಹೆಚ್ಚಿಸಲು 13 ಸರ್ಕಾರಿ ಬ್ಯಾಂಕುಗಳಲ್ಲಿ 22 ಸಾವಿರದ 915 ಕೋಟಿ...

ನವದೆಹಲಿ: ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ದ್ರವ್ಯತೆ ಹೆಚ್ಚಿಸಲು 13 ಸರ್ಕಾರಿ ಬ್ಯಾಂಕುಗಳಲ್ಲಿ 22 ಸಾವಿರದ 915 ಕೋಟಿ ರೂಪಾಯಿ ಬಿಡುಗಡೆಮಾಡುವುದಾಗಿ ಕೇಂದ್ರ ಸರ್ಕಾರ ಮಂಗಳವಾರ ಘೋಷಿಸಿದೆ.
ಹಣ ನೀಡಿಕೆಯು ಇಂದ್ರಧನುಷ್ ಯೋಜನೆಯ ಭಾಗವಾಗಿದ್ದು, ಇದರಡಿ ಬ್ಯಾಂಕುಗಳು ನಾಲ್ಕು ವರ್ಷಗಳ ಅವಧಿಗೆ 70 ಸಾವಿರ ಕೋಟಿ ರೂಪಾಯಿ ಪಡೆದುಕೊಳ್ಳಲಿವೆ.
ಹಣದ ಒಳಹರಿವು ಸರ್ಕಾರಕ್ಕೆ ಅಗತ್ಯವಾಗಿದೆ. ಏಕೆಂದರೆ ಭಾರತದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ 120 ಶತಕೋಟಿ ಡಾಲರ್ ಸಾಲ ಮರುಪಾವತಿಯಾಗದೆ ಉಳಿದುಕೊಂಡಿದೆ. ಇದು ದೇಶದ ಅರ್ಥವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ.
ಬ್ಯಾಂಕ್ ಗಳ ಮರುಬಂಡವಾಳೀಕರಣಕ್ಕೆ ಈ ಬಾರಿಯ ಹಣಕಾಸು ವರ್ಷದಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ 25 ಸಾವಿರ ಕೋಟಿ ರೂಪಾಯಿ ಬಜೆಟ್ ನೀಡಿದ್ದರು. ದೇಶದಲ್ಲಿ ಅತ್ಯಂತ ಹೆಚ್ಚು ಸಾಲ ನೀಡುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ 7 ಸಾವಿರದ 575 ಕೋಟಿ ರೂಪಾಯಿ ಸಿಗಲಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 2 ಸಾವಿರದ 816 ಕೋಟಿ ರೂ, ಬ್ಯಾಂಕ್ ಆಫ್ ಇಂಡಿಯಾಗೆ 1 ಸಾವಿರದ 784 ಕೋಟಿ ರೂಪಾಯಿ ಸಿಗಲಿದೆ.
ಹಣದ ಒಳಹರಿವಿನ ಘೋಷಣೆಯಾಗುತ್ತಿದ್ದಂತೆ ಇಂದು ಸಾರ್ವಜನಿಕ ವಲಯ ಬ್ಯಾಂಕ್ ಗಳ ಷೇರುಗಳಲ್ಲಿ ಏರಿಕೆ ಕಂಡುಬಂತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT