ರಘುರಾಮ್ ರಾಜನ್ 
ವಾಣಿಜ್ಯ

ಆರ್ ಬಿಐ ಸ್ವಾಯತ್ತತೆ ಕಾಪಾಡಿ: ಕೇಂದ್ರ ಸರ್ಕಾರಕ್ಕೆ ರಾಜನ್ ಸಲಹೆ

ಟೀಕಾಕಾರರಿಗೆ ಮಂಗಳವಾರ ತಿರುಗೇಟು ನೀಡಿರುವ ಆರ್ ಬಿಐ ಗವರ್ನರ್ ರುಘುರಾಮ್ ರಾಜನ್ ಅವರು, ಕೇಂದ್ರ ಬ್ಯಾಂಕ್ ನ ಸ್ವಾಯತ್ತತೆ ಕಾಪಾಡಲು...

ಮುಂಬೈ: ಟೀಕಾಕಾರರಿಗೆ ಮಂಗಳವಾರ ತಿರುಗೇಟು ನೀಡಿರುವ ಆರ್ ಬಿಐ ಗವರ್ನರ್ ರುಘುರಾಮ್ ರಾಜನ್ ಅವರು, ಕೇಂದ್ರ ಬ್ಯಾಂಕ್ ನ ಸ್ವಾಯತ್ತತೆ ಕಾಪಾಡಲು ಪ್ರಚೋದಿತ ಟೀಕೆಗಳ ಹಿಂದಿರುವ ಉದ್ದೇಶವನ್ನು ಗಮನಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅತಿ ವೇಗವಾಗಿ ಬೆಳೆಯುತ್ತಿರುವ ಭಾರತದ ಅಭಿವೃದ್ಧಿ ದರಕ್ಕೆ ಆರ್ ಬಿಐ ಅಡ್ಡಿಯಾಗುತ್ತಿದೆ ಎಂಬ ಟೀಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ನಿರ್ಗಮಿತ ಆರ್ ಬಿಐ ಮುಖ್ಯಸ್ಥ, ಅದೃಷ್ಟವಶಾತ್ ಹಣದುಬ್ಬರ ಬಹಳಷ್ಟು ಕಡಿಮೆಯಾಗಿದೆ. ಆದರೆ ಇದಕ್ಕೆ ಆರ್ ಬಿಐ ನೀತಿ ಕಾರಣವಲ್ಲ. ತೈಲ ಬೆಲೆ ಇಳಿಕೆ ಕಾರಣ ಎಂದಿದ್ದಾರೆ.
ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಇಳಿಕೆ ಒಂದು ಗಮನಾರ್ಹ ಅಂಶವಾದರೂ ಸರ್ಕಾರ ಅದರ ಲಾಭವನ್ನು ಸ್ಥಳೀಯವಾಗಿ ವರ್ಗಾಯಿಸದೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಿದೆ ಎಂದು ರಘುರಾಮ್ ರಾಜನ್ ಅವರು ಹೇಳಿದ್ದಾರೆ.
ಎರಡನೇ ಅವಧಿಗೆ ಆರ್ ಬಿಐ ಗವರ್ನರ್ ಆಗಿ ಮುಂದುವರೆಯಲು ನಿರಾಕರಿಸಿರುವ ರಾಜನ್ ಅವರು ತಮ್ಮ ವಿರುದ್ಧದ ವೈಯಕ್ತಿಕ ಟೀಕೆಗಳನ್ನು ಸಹ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. 
ಹಣದುಬ್ಬರವನ್ನು ಗಮದಲ್ಲಿಟ್ಟುಕೊಂಡು ಬಡ್ಡಿದರ ಕಡಿಮೆ ಮಾಡದ ರಘುರಾಮ್ ರಾಜನ್ ಮಾನಸಿಕರಾಗಿ ಭಾರತೀಯರಾಗಿಲ್ಲ ಎಂದು ಇತ್ತೀಚಿನ ದಿನಗಳಲ್ಲಿ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಆರೋಪ ಮಾಡಿದ್ದರು. ಅಲ್ಲದೆ ರಘುರಾಮ್ ರಾಜನ್ ಕಾಂಗ್ರೆಸ್ ನ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT