ಧರ್ಮೇಂದ್ರ ಪ್ರಧಾನ್ 
ವಾಣಿಜ್ಯ

ತೈಲ ನಿಕ್ಷೇಪ ಪತ್ತೆಗೆ ಉತ್ತೇಜನ, ಬೆಲೆ ನಿಗದಿಗೆ ಹೊಸ ನೀತಿ ಪ್ರಕಟಿಸಿದ ಕೇಂದ್ರ ಸಚಿವ ಸಂಪುಟ

ವಿವಿಧ ಕ್ಷೇತ್ರಗಳಲ್ಲಿ ಉತ್ಪಾದನೆ ಮಾಡಲಾಗುತ್ತಿರುವ ಹೈಡ್ರೋ ಕಾರ್ಬನ್ ಗಳ ಬೆಲೆ ನಿಗದಿಗೆ ಹೊಸ ನಿಯಮ ಜಾರಿಗೆ ಬರಲಿದೆ ಎಂದು ಕೆಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿಕೆ ನೀಡಿದ್ದಾರೆ.

ನವದೆಹಲಿ: ವಿವಿಧ ಕ್ಷೇತ್ರಗಳಲ್ಲಿ ಉತ್ಪಾದನೆ ಮಾಡಲಾಗುತ್ತಿರುವ ಹೈಡ್ರೋ ಕಾರ್ಬನ್ ಗಳ ಬೆಲೆ ನಿಗದಿಗೆ ಹೊಸ ನಿಯಮ ಜಾರಿಗೆ ಬರಲಿದೆ ಎಂದು ಕೆಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿಕೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಧರ್ಮೇಂದ್ರ ಪ್ರಧಾನ್,  ಸುಮಾರು 180,000 ಕೋಟಿ ರೂ  ಮೌಲ್ಯದ ತೈಲ ನಿಕ್ಷೇಪಗಳನ್ನು ಹೊರತೆಗೆಯಲು ಅಗತ್ಯವಿರುವ ಕ್ರಮ ಕೈಗೊಳ್ಳಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ತೈಲ ನಿಕ್ಷೇಪಗಳನ್ನು ಹೊರತೆಗೆಯಲು, ಉತ್ಪಾದನೆಯನ್ನು ಉತ್ತೇಜಿಸುವುದಕ್ಕಾಗಿ  ವಿವಿಧ ಕ್ಷೇತ್ರಗಳಲ್ಲಿ ಪತ್ತೆಯಾಗುತ್ತಿರುವ ಹಾಗೂ ಉತ್ಪಾದನೆ ಮಾಡಲಾಗುತ್ತಿರುವ  ಹೈಡ್ರೋ ಕಾರ್ಬನ್ ಗಳ ಬೆಲೆ ನಿಗದಿಗೆ ಹೊಸ ನಿಯಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.
ಆದಾಯ-ಹಂಚಿಕೆಯ ಮಾದರಿಯನ್ನೊಳಗೊಂಡ ಹೊಸ ತೈಲ ಮತ್ತು ಅನಿಲ ಪರಿಶೋಧನೆ ನೀತಿಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಅತಿ ಹೆಚ್ಚು ಆಳವಿರುವ ನೀರಿನ ಪ್ರದೇಶ,  ಹೆಚ್ಚಿನ ಒತ್ತಡ ಹೆಚ್ಚಿನ ಉಷ್ಣಾಂಶ ಪ್ರದೇಶಗಳನ್ನು ತೈಲನಿಕ್ಷೇಪ ಮಾಡುವ ಕಠಿಣ ಪ್ರದೇಶಗಳು ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT