ಧರ್ಮೇಂದ್ರ ಪ್ರಧಾನ್ 
ವಾಣಿಜ್ಯ

ತೈಲ ನಿಕ್ಷೇಪ ಪತ್ತೆಗೆ ಉತ್ತೇಜನ, ಬೆಲೆ ನಿಗದಿಗೆ ಹೊಸ ನೀತಿ ಪ್ರಕಟಿಸಿದ ಕೇಂದ್ರ ಸಚಿವ ಸಂಪುಟ

ವಿವಿಧ ಕ್ಷೇತ್ರಗಳಲ್ಲಿ ಉತ್ಪಾದನೆ ಮಾಡಲಾಗುತ್ತಿರುವ ಹೈಡ್ರೋ ಕಾರ್ಬನ್ ಗಳ ಬೆಲೆ ನಿಗದಿಗೆ ಹೊಸ ನಿಯಮ ಜಾರಿಗೆ ಬರಲಿದೆ ಎಂದು ಕೆಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿಕೆ ನೀಡಿದ್ದಾರೆ.

ನವದೆಹಲಿ: ವಿವಿಧ ಕ್ಷೇತ್ರಗಳಲ್ಲಿ ಉತ್ಪಾದನೆ ಮಾಡಲಾಗುತ್ತಿರುವ ಹೈಡ್ರೋ ಕಾರ್ಬನ್ ಗಳ ಬೆಲೆ ನಿಗದಿಗೆ ಹೊಸ ನಿಯಮ ಜಾರಿಗೆ ಬರಲಿದೆ ಎಂದು ಕೆಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿಕೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಧರ್ಮೇಂದ್ರ ಪ್ರಧಾನ್,  ಸುಮಾರು 180,000 ಕೋಟಿ ರೂ  ಮೌಲ್ಯದ ತೈಲ ನಿಕ್ಷೇಪಗಳನ್ನು ಹೊರತೆಗೆಯಲು ಅಗತ್ಯವಿರುವ ಕ್ರಮ ಕೈಗೊಳ್ಳಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ತೈಲ ನಿಕ್ಷೇಪಗಳನ್ನು ಹೊರತೆಗೆಯಲು, ಉತ್ಪಾದನೆಯನ್ನು ಉತ್ತೇಜಿಸುವುದಕ್ಕಾಗಿ  ವಿವಿಧ ಕ್ಷೇತ್ರಗಳಲ್ಲಿ ಪತ್ತೆಯಾಗುತ್ತಿರುವ ಹಾಗೂ ಉತ್ಪಾದನೆ ಮಾಡಲಾಗುತ್ತಿರುವ  ಹೈಡ್ರೋ ಕಾರ್ಬನ್ ಗಳ ಬೆಲೆ ನಿಗದಿಗೆ ಹೊಸ ನಿಯಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.
ಆದಾಯ-ಹಂಚಿಕೆಯ ಮಾದರಿಯನ್ನೊಳಗೊಂಡ ಹೊಸ ತೈಲ ಮತ್ತು ಅನಿಲ ಪರಿಶೋಧನೆ ನೀತಿಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಅತಿ ಹೆಚ್ಚು ಆಳವಿರುವ ನೀರಿನ ಪ್ರದೇಶ,  ಹೆಚ್ಚಿನ ಒತ್ತಡ ಹೆಚ್ಚಿನ ಉಷ್ಣಾಂಶ ಪ್ರದೇಶಗಳನ್ನು ತೈಲನಿಕ್ಷೇಪ ಮಾಡುವ ಕಠಿಣ ಪ್ರದೇಶಗಳು ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT