ಸಾಂದರ್ಭಿಕ ಚಿತ್ರ 
ವಾಣಿಜ್ಯ

ಎಟಿಎಂ ಸೇವೆ ಸಹಜ ಸ್ಥಿತಿಗೆ ಬರಲು ಇನ್ನೂ 10 ದಿನ ಬೇಕು: ಎಸ್‌ಬಿಐ

500 ಹಾಗೂ 1000 ರುಪಾಯಿ ನೋಟ್ ನಿಷೇಧದಿಂದಾಗಿ ಬ್ಯಾಂಕ್ ಹಾಗೂ ಎಟಿಎಂ ಮುಂದೆ ಕ್ಯೂ ನಿಂತು, ಹಣಕ್ಕಾಗಿ ಪರದಾಡುತ್ತಿರುವ ಜನಕ್ಕೆ...

ಮುಂಬೈ: 500 ಹಾಗೂ 1000 ರುಪಾಯಿ ನೋಟ್ ನಿಷೇಧದಿಂದಾಗಿ ಬ್ಯಾಂಕ್ ಹಾಗೂ ಎಟಿಎಂ ಮುಂದೆ ಕ್ಯೂ ನಿಂತು, ಹಣಕ್ಕಾಗಿ ಪರದಾಡುತ್ತಿರುವ ಜನಕ್ಕೆ ಇದೊಂದು ಶಾಕಿಂಗ್ ಸುದ್ದಿ. ಎಟಿಎಂ ಸೇವೆ ಸಹಜ ಸ್ಥಿತಿಗೆ ಬರಲು ಇನ್ನೂ ಹತ್ತು ದಿನಗಳು ಬೇಕಾಗಬಹುದು ಎಂದು ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೇಳಿದೆ.
ದೇಶದಲ್ಲಿ ಎಟಿಎಂ ಗಳ ಸಂಖ್ಯೆ ಸಾಕಷ್ಟು ದೊಡ್ಡದೇ ಇದೆ. ಆದರೆ ಅದಕ್ಕೆ ಹಣ ತುಂಬುವ ಸೇವಾದಾರರು ಕಡಿಮೆ ಸಂಖ್ಯೆಯಲ್ಲಿರುವುದರಿಂದ ಮತ್ತು ಸದ್ಯಕ್ಕೆ ಎಟಿಎಂ ಬಳಕೆದಾರರ ಸಂಖ್ಯೆ ವಿಪರೀತವಾಗಿ ಹೆಚ್ಚಾಗಿರುವುದರಿಂದ ಒಟ್ಟಾರೆಯಾಗಿ ಎಟಿಎಂ ಸೇವೆ ಮಾಮೂಲಿಗೆ ಬರಲು ಕನಿಷ್ಠ ಹತ್ತು ಇನ್ನೂ ದಿನಗಳು ಬೇಕಾಗಬಹುದು ಎಂದು ಎಸ್‌ಬಿಐ ಹೇಳಿದೆ.
ಆರ್ ಬಿಐ ಹೇಳಿರುವ ಪ್ರಕಾರ ಇಂದಿನಿಂದಲೇ ದೇಶಾದ್ಯಂತ ಎಟಿಎಂ ಸೇವೆಗಳು ಬಳಕೆದಾರರಿಗೆ ಲಭ್ಯವಾಗಲಿದ್ದು ನಗದಿಗಾಗಿ ಪರದಾಡುತ್ತಿರುವ ಜನರ ಸಮಸ್ಯೆ ಬಹುಮಟ್ಟಿಗೆ ನಿವಾರಣೆಯಾಗಲಿದೆ.
ಸರ್ಕಾರದ ಹೊಸ ಸೂಚನೆಯ ಪ್ರಕಾರ ಎಟಿಎಂ ಗಳಲ್ಲಿ ದಿನಕ್ಕೆ ಒಬ್ಬ ಬಳಕೆದಾರರ ಗರಿಷ್ಠ 2,000 ರೂ. ನಗದನ್ನು ಮಾತ್ರವೇ ಪಡೆಯುವುದಕ್ಕೆ ಅವಕಾಶವಿದೆ. ಆ ಪ್ರಕಾರ ಎಟಿಎಂ ವ್ಯವಸ್ಥೆಯನ್ನು  ಕಾನ್‌ಫಿಗರೇಶನ್‌ ಮಾಡಬೇಕಿದೆ. ಇದನ್ನು ಒಂದರ ಬಳಿಕ ಒಂದಾಗಿ ಮಾಡಲಾಗುತ್ತಿದೆ. ಎಲ್ಲ ಬ್ಯಾಂಕುಗಳ ಎಟಿಎಂ ಸೇರಿ ದೇಶದಲ್ಲಿ ಒಟ್ಟು ಎರಡು ಲಕ್ಷ ಎಟಿಎಂ ಗಳಿವೆ. ಆದರೆ ಇವುಗಳ ಸೇವಾ ಪೂರೈಕೆದಾರರು ಕೇವಲ ಮೂರರಿಂದ ನಾಲ್ಕರ ಸಂಖ್ಯೆಯಲ್ಲಿದ್ದಾರೆ; ಜನರು ಇದನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕಾಗಿದೆ ಎಂದು ಬ್ಯಾಂಕ್‌ ಅಧ್ಯಕ್ಷೆ ಅರುಂಧತಿ ಭಟ್ಟಾಚಾರ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT