ಎಫ್ ಡಿ ಬಡ್ಡಿದರ ಕಡಿತ (ಸಂಗ್ರಹ ಚಿತ್ರ) 
ವಾಣಿಜ್ಯ

ನೋಟು ನಿಷೇಧ ಎಫೆಕ್ಟ್; ಎಫ್ ಡಿ ಬಡ್ಡಿ ದರ ಕಡಿತ!

ಸ್ಥಿರ ಠೇವಣಿ (ಫಿಕ್ಸೆಡ್ ಡೆಪಾಸಿಟ್-ಎಫ್ ಡಿ) ಮೇಲಿನ ಬಡ್ಡಿದರವನ್ನು ಕಡಿತಗೊಳಿಸಲು ಬ್ಯಾಂಕುಗಳು ನಿರ್ಧರಿಸಿವೆ ಎಂದು ತಿಳಿದುಬಂದಿದೆ.

ನವದೆಹಲಿ: 500 ಮತ್ತು 1000 ರು.ಮುಖಬೆಲೆಯ ನೋಟುಗಳನ್ನು ನಿಷೇಧಿಸಿರುವ ಸರ್ಕಾರದ ಕ್ರಮದಿಂದಾಗಿ ದೇಶದ ಪ್ರಮುಖ ಬ್ಯಾಂಕುಗಳಿಗೆ ಭಾರಿ ಪ್ರಮಾಣದಲ್ಲಿ ಠೇವಣಿಗಳು ಹರಿದುಬರುತ್ತಿದ್ದು, ಇದರ ಪರಿಣಾಮ ಸ್ಥಿರ ಠೇವಣಿ  (ಫಿಕ್ಸೆಡ್ ಡೆಪಾಸಿಟ್-ಎಫ್ ಡಿ) ಮೇಲಿನ ಬಡ್ಡಿದರವನ್ನು ಕಡಿತಗೊಳಿಸಲು ಬ್ಯಾಂಕುಗಳು ನಿರ್ಧರಿಸಿವೆ ಎಂದು ತಿಳಿದುಬಂದಿದೆ.

ಇದರ ಮೊದಲ ಹಂತವಾಗಿ ಈಗಾಗಲೇ ದೇಶದ ಪ್ರಮುಖ ಬ್ಯಾಂಕಿಂಗ್ ಸಂಸ್ಥೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಆಯ್ದ ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರದಲ್ಲಿ ಶೇ.0.15ರಷ್ಟು ಕಡಿತಗೊಳಿಸಿದೆ ಎಂದು ತಿಳಿದುಬಂದಿದೆ.  ಪ್ರಮುಖವಾಗಿ ಕೇಂದ್ರ ಸರ್ಕಾರ ನೋಟು ನಿಷೇಧ ನಿರ್ಧಾರ ಘೋಷಣೆ ಮಾಡಿದ ಬಳಿಕ ಎಸ್ ಬಿಐ ಈ ವರೆಗೂ ಸುಮಾರು 80 ಸಾವಿರ ಕೋಟಿಗೂ ಅಧಿಕ ಠೇವಣಿ ಹರಿದುಬಂದಿದ್ದು, ಗ್ರಾಹಕರು ತಮ್ಮ ಬಳಿ ಇರುವ ಹಳೆಯ 500  ಮತ್ತು 1000 ನೋಟುಗಳನ್ನು ಠೇವಣಿ ಮಾಡಲು ಮುಗಿಬಿದ್ದಿದ್ದಾರೆ.

ಹೀಗಾಗಿ ಬ್ಯಾಂಕುಗಳಿಗೆ ಅಪಾರ ಪ್ರಮಾಣದ ಹಣ ಹರಿದು ಬರುತ್ತಿದ್ದು, ಇದೇ ಕಾರಣಕ್ಕೆ ಸ್ಥಿರ ಠೇವಣಿ ಮೇಲಿನ ಬಡ್ಡಿದರವನ್ನು ಕಡಿತಗೊಳಿಸಲು ಬ್ಯಾಂಕುಗಳು ನಿರ್ಧರಿಸಿವೆ ಎಂದು ಹೇಳಲಾಗುತ್ತಿದೆ. ಇದೇ ಡಿಸೆಂಬರ್ 7ರಂದು  ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಧ್ವೈಮಾಸಿಕ ಹಣಕಾಸು ನೀತಿ ಪ್ರಕಟಿಸಲಿದ್ದು, ಈ ವೇಳೆ ಸ್ಥಿರ ಠೇವಣಿ ಮತ್ತು ಇತರೆ ಬಡ್ಡಿದರಗಳನ್ನು ಕಡಿತಗೊಳಿಸುವ ಕುರಿತು ಘೋಷಣೆ ಹೊರಹಾಕುವ ಸಾಧ್ಯತೆ ಇದೆ ಆರ್ಥಿಕ ವಿಶ್ಲೇಷಕರು  ಅಭಿಪ್ರಾಯಪಟ್ಟಿದ್ದಾರೆ.

ಎಸ್ ಬಿಐ ಸ್ಥಿರ ಠೇವಣಿ ಬಡ್ಡಿದರ ಕಡಿತ
ಇನ್ನು ನೋಟು ನಿಷೇಧ ಬಳಿಕ ಇದೇ ಮೊದಲ ಬಾರಿಗೆ ಎಸ್ ಬಿಐ ತನ್ನ ಸ್ಥಿರ ಠೇವಣಿ ಮೇಲಿನ ಬಡ್ಡಿದರವನ್ನು ಕಡಿತಗೊಳಿಸಿದ್ದು, ಆಯ್ದ ಸ್ಥಿರ ಠೇವಣಿ ಮೇಲಿನ ಬಡ್ಡಿದರ ಕಡಿತಗೊಳಿಸಿದೆ. 1 ವರ್ಷದಿಂದ 455 ದಿನಗಳವರೆಗಿನ ಸ್ಥಿರ  ಠೇವಣಿ ಮೇಲಿನ ಬಡ್ಡಿ ದರದಲ್ಲಿ ಶೇ.0.15ರಷ್ಟು ಕಡಿತಗೊಳಿಸಿದೆ. ಇಂದಿನಿಂದಲೂ ನೂತನ ಬಡ್ಡಿದರ ಜಾರಿಯಾಗಲಿದೆ ಎಂದು ಎಸ್ ಬಿಐ ಹೇಳಿದೆ. ಇನ್ನುಳಿದಂತೆ 2-3 ವರ್ಷಗಳ ಅವಧಿಯ ಎಫ್ ಡಿ ಬಡ್ಡಿದರದಲ್ಲಿ ಯಾವುದೇ  ರೀತಿಯ ಬದಲಾವಣೆ ಇಲ್ಲ ಎಂದು ಎಸ್ ಬಿಐ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT