ವಿತ್ತ ಸಚಿವ ಅರುಣ್ ಜೇಟ್ಲಿ 
ವಾಣಿಜ್ಯ

ಬ್ಯಾಂಕ್ ಲಾಕರ್ ಸೀಲ್ ಮಾಡುವ, ಆಭರಣ ವಶಪಡಿಸಿಕೊಳ್ಳುವ ಯಾವುದೇ ಕ್ರಮ ಇಲ್ಲ: ಹಣಕಾಸು ಸಚಿವಾಲಯ

ಬ್ಯಾಂಕ್ ಲಾಕರ್ ಗಳ ಮೇಲೆ ಕೇಂದ್ರ ಸರ್ಕಾರ 2 ಹಂತದ ಸೀಮಿತ ದಾಳಿಯನ್ನು ನಡೆಸಲಿದೆ ಎಂಬ ವದಂತಿಗಳನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದ್ದು, ಬ್ಯಾಂಕ್ ಲಾಕರ್ ಗಳನ್ನು ಸೀಲ್ ಮಾಡುವ ಅಥವಾ ಆಭರಣಗಳನ್ನು ವಶಕ್ಕೆ ಪಡೆದುಕೊಳ್ಳುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು...

ನವದೆಹಲಿ: ಬ್ಯಾಂಕ್ ಲಾಕರ್ ಗಳ ಮೇಲೆ ಕೇಂದ್ರ ಸರ್ಕಾರ 2 ಹಂತದ ಸೀಮಿತ ದಾಳಿಯನ್ನು ನಡೆಸಲಿದೆ ಎಂಬ ವದಂತಿಗಳನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದ್ದು, ಬ್ಯಾಂಕ್ ಲಾಕರ್ ಗಳನ್ನು ಸೀಲ್ ಮಾಡುವ ಅಥವಾ ಆಭರಣಗಳನ್ನು ವಶಕ್ಕೆ ಪಡೆದುಕೊಳ್ಳುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಹಣಕಾಸು ಸಚಿವಾಲಯ ಶುಕ್ರವಾರ ಸ್ಪಷ್ಟಪಡಿಸಿದೆ.

ದುಬಾರಿ ನೋಟಿನ ಮೇಲೆ  ನಿಷೇಧ ಹೇರಿದ ಬಳಿಕ ಇದೀಗ ಕೇಂದ್ರ ಸರ್ಕಾರದ ಕಣ್ಣು ಬ್ಯಾಂಕ್ ಲಾಕರ್ ಗಳ ಮೇಲೆ ಬಿದ್ದಿದ್ದು, ಚಿನ್ನಾಭರಣಗಳು ಹಾಗೂ ವಜ್ರಗಳನ್ನು ವಶಕ್ಕೆ ಪಡೆಯಲಿದೆ ಎಂಬ ಸುದ್ದಿಗಳು ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ವಿತ್ತ ಸಚಿವಾಲಯವು, ಲಾಕರ್ ಗಳನ್ನು ಸರ್ಕಾರ ಸೀಸ್ ಮಾಡಲಿದೆ ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ವರದಿಯೊಂದು ಆಧಾರ ರಹಿತವಾಗಿದ್ದು, ಬ್ಯಾಂಕ್ ಲಾಕರ್ ಗಳನ್ನು ಸೀಸ್ ಮಾಡುವ ಆಭರಣಗಳನ್ನು ವಶಕ್ಕೆ ಪಡೆದುಕೊಳ್ಳುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT