ಅರುಂಧತಿ ಭಟ್ಟಾಚಾರ್ಯ 
ವಾಣಿಜ್ಯ

ಮಲ್ಯ ಸಾಲ ಮನ್ನಾ ಸುದ್ದಿ: ಮಾಧ್ಯಮಗಳ 'ಅಸ್ಪಷ್ಟ' ಪ್ರಚಾರ ಎಂದ ಎಸ್‏ಬಿಐ ಮುಖ್ಯಸ್ಥೆ

ವಿಜಯ್ ಮಲ್ಯ ಒಡೆತನದ ಕಿಂಗ್ ಫಿಶರ್ ಏರ್ ಲೈನ್ಸ್ ನ 1201 ಕೋಟಿ ರುಪಾಯಿ ಸಾಲವನ್ನು ಉದ್ದೇಶಪೂರ್ವಕವಾಗಿ ಎಸ್ಬಿಐ ಮನ್ನಾ ಮಾಡಿದೆ ಎಂಬ ಮಾಧ್ಯಮ...

ನವದೆಹಲಿ: ವಿಜಯ್ ಮಲ್ಯ ಒಡೆತನದ ಕಿಂಗ್ ಫಿಶರ್ ಏರ್ ಲೈನ್ಸ್ ನ 1201 ಕೋಟಿ ರುಪಾಯಿ ಸಾಲವನ್ನು ಉದ್ದೇಶಪೂರ್ವಕವಾಗಿ ಎಸ್ಬಿಐ ಮನ್ನಾ ಮಾಡಿದೆ ಎಂಬ ಮಾಧ್ಯಮ ವರದಿಯನ್ನು ಎಸ್ಬಿಐ ವ್ಯವಸ್ಥಾಪಕ ನಿರ್ದೇಶಕಿ ಅರುಂಧತಿ ಭಟ್ಟಾಚಾರ್ಯ ನಿರಾಕಿಸಿದ್ದಾರೆ. 
ಮಲ್ಯ ಸಾಲ ಮನ್ನಾ ಸುದ್ದಿ ಮಾಧ್ಯಮಗಳ ಅಸ್ಪಷ್ಟ ಪ್ರಚಾರ ಎಂದು ಹೇಳಿರುವ ಅವರು ನಮ್ಮ ಬ್ಯಾಂಕಿನ ಗೌರವಕ್ಕೆ ಕಳಂಕ ತರಲು ಮಾಧ್ಯಮದವರು ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. 
ಬಾಕಿಯಿರುವ ಸುಸ್ತಿದಾರ ಸಂಗ್ರಹ ಖಾತೆಗೆ ಇವರ ಖಾತೆಯನ್ನು ಸೇರಿಸುವುದರಿಂದ ಲೆಕ್ಕಾಚಾರಗಳ ಬಗ್ಗೆ ಹೆಚ್ಚಿನ ನಿಗಾ ಇಡಲು ಸಾಧ್ಯವಾಗುತ್ತದೆ ಎಂದು ಹೇಳಿದ್ದು, ಮಲ್ಯರಿಂದ ಎಸ್ಬಿಐ ಹಣವನ್ನು ವಸೂಲು ಮಾಡುತ್ತದೆ. ಆದರೆ ಇದಕ್ಕೆ ಸಮಯಾವಕಾಶ ಹಿಡಿಯಬಹುದು ಎಂದು ಅರುಂಧತಿ ಸ್ಪಷ್ಟನೆ ನೀಡಿದ್ದಾರೆ. 
ವಿಜಯ್ ಮಲ್ಯ ಅವರ ಕಿಂಗ್ ಫಿಶರ್ ಏರ್ ಲೈನ್ಸ್ ಸಂಸ್ಥೆಯ 1,201 ಕೋಟಿ ರುಪಾಯಿ ಸೇರಿದಂತೆ ಬಾಕಿ ಉಳಿಸಿಕೊಂಡಿದ್ದ ಒಟ್ಟು 7 ಸಾವಿರ ಕೋಟಿ ರುಪಾಯಿ ಸಾಲವನ್ನು ಅಡ್ವಾನ್ಸ್ ಅಂಡರ್ ಕಲೆಕ್ಷನ್ ಅಕೌಂಟ್ಸ್(ಎಯುಸಿಎ) ವರ್ಗಕ್ಕೆ ವರ್ಗಾಯಿಸಲಾಗಿದೆ ಎಂದು ಹೇಳಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT