ಸೈರಸ್ ಮಿಸ್ಟ್ರಿ 
ವಾಣಿಜ್ಯ

ಸೈರಸ್ ಮಿಸ್ಟ್ರಿ ಕಂಪೆನಿಗೆ ಸಾಕಷ್ಟು ಹಾನಿಯನ್ನುಂಟುಮಾಡಿದ್ದಾರೆ: ಟಿಸಿಎಸ್

ಪದಚ್ಯುತ ಅಧ್ಯಕ್ಷ ಸೈರಸ್ ಮಿಸ್ಟ್ರಿ ತಮ್ಮ ನಡತೆಯಿಂದ ಕಂಪೆನಿಗೆ, ಷೇರುದಾರರಿಗೆ...

ನವದೆಹಲಿ: ಪದಚ್ಯುತ ಅಧ್ಯಕ್ಷ ಸೈರಸ್ ಮಿಸ್ಟ್ರಿ ತಮ್ಮ ನಡತೆಯಿಂದ ಕಂಪೆನಿಗೆ, ಷೇರುದಾರರಿಗೆ, ಮಧ್ಯಸ್ಥಗಾರರಿಗೆ ಮತ್ತು ನೌಕರರಿಗೆ ಸಾಕಷ್ಟು ಹಾನಿಯನ್ನುಂಟುಮಾಡಿದ್ದು ಅವರನ್ನು ಕಂಪೆನಿಯ ಮಂಡಳಿಯಿಂದ ತೆಗೆದುಹಾಕಬೇಕೆಂದು ಟಾಟಾ ಕನ್ಸಲ್ಟೆನ್ಸಿ ಸರ್ವಿಸ್ ಹೇಳಿದೆ.
ತನ್ನ ಷೇರುದಾರರಿಗೆ ಈ ಕುರಿತು ನೊಟೀಸ್ ಕಳುಹಿಸಿರುವ ಟಿಸಿಎಸ್, ಮಿಸ್ಟ್ರಿಯವರು ಟಾಟಾ ಸನ್ಸ್ ನ ವಿಶ್ವಾಸವನ್ನು ಕಳೆದುಕೊಂಡಿದ್ದು ಅವರನ್ನು ಕೂಡಲೇ ಮಂಡಳಿಯಿಂದ ತೆಗೆದುಹಾಕಬೇಕೆಂದು ಹೇಳಿದೆ. ಮಿಸ್ಟ್ರಿಯವರು ಟಾಟಾ ಸನ್ಸ್ ನಲ್ಲಿ ಅತಿದೊಡ್ಡ ಪಾಲನ್ನು ಹೊಂದಿದ್ದು ಟಾಟಾ ಗ್ರೂಪ್ ನ 103 ಶತಕೋಟಿಯಷ್ಟು ಬಂಡವಾಳ ಅವರದ್ದಾಗಿದೆ.
ಮಿಸ್ಟ್ರಿಯವರು ರತನ್ ಟಾಟಾ ನೇತೃತ್ವದ ಟಾಟಾ ಸನ್ಸ್ ಬ್ರಾಂಡ್ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ನೊಟೀಸ್ ನಲ್ಲಿ ಆಪಾದಿಸಿದೆ.
ಶೇಕಡಾ 73.26ರಷ್ಟು ಪಾಲುದಾರಿಕೆಯನ್ನು ಹೊಂದಿದ್ದ ಮಿಸ್ಟ್ರಿಯವರನ್ನು ಕಂಪೆನಿಯ ಅಧ್ಯಕ್ಷ ಸ್ಥಾನದಿಂದ ರತನ್ ಟಾಟಾ ಕಳೆದ ತಿಂಗಳು ವಜಾಗೊಳಿಸಿದ್ದರು. ಇದೀಗ ಕಂಪೆನಿಯ ಷೇರುದಾರರ ಅತಿ ವಿಶೇಷ ಸಾಮಾನ್ಯ ಸಭೆ ನಡೆಸಿ ಮಂಡಳಿಯ ನಿರ್ದೇಶಕ ಸ್ಥಾನದಿಂದ ಸೈರಸ್ ಮಿಸ್ಟ್ರಿಯವರನ್ನು ತೆಗೆದುಹಾಕುವ ಬಗ್ಗೆ ಪರಿಗಣಿಸಬೇಕೆಂದು ಟಿಸಿಎಸ್ ಹೇಳಿದೆ.
ಕಳೆದ ವಾರ ನಡೆದ ಕಂಪೆನಿಯ ಮಂಡಳಿ ಸಭೆಯಲ್ಲಿ ಮಿಸ್ಟ್ರಿಯವರು ಗೈರುಹಾಜರಾಗಿದ್ದರು. ಡಿಸೆಂಬರ್ 13ರಂದು ವಿಶೇಷ ಸಾಮಾನ್ಯ ಸಭೆಯನ್ನು ಟಿಸಿಎಸ್ ಕರೆದಿದೆ.
ತಮ್ಮನ್ನು ಟಾಟಾ ಸನ್ಸ್ ನ ಕಾರ್ಯಕಾರಿ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದ ನಂತರ ಮಿಸ್ಟ್ರಿಯವರು ಕೆಲವು ಆಧಾರರಹಿತ ಆರೋಪಗಳನ್ನು ಮಾಡಿದ್ದು, ಅದರಿಂದ ಟಾಟಾ ಸನ್ಸ್ ಲಿಮಿಟೆಡ್ ಮತ್ತು ನಿರ್ದೇಶಕರ ಮಂಡಳಿಗೆ ಮಾತ್ರ ಗೌರವಕ್ಕೆ ಧಕ್ಕೆಯುಂಟಾಗಿರುವುದಲ್ಲದೆ ಇಡೀ ಟಾಟಾ ಗ್ರೂಪ್ ನ ಖ್ಯಾತಿಗೆ ಧಕ್ಕೆಯುಂಟಾಗಿದೆ ಎಂದು ನೊಟೀಸ್ ನಲ್ಲಿ ಟಾಟಾ ಸನ್ಸ್ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT