ಮುಂಬೈ: ಟಾಟಾ ಸನ್ಸ್ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರನ್ನು ಟಾಟಾಅ ಸ್ಟೀಲ್ ನ ಅಧ್ಯಕ್ಷ ಸ್ಥಾನದಿಂದಲೂ ವಜಾ ಮಾಡಲಾಗಿದೆ. ನ.25 ರಂದು ಮುಂಬೈ ನಲ್ಲಿ ನಡೆದ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಮುಖ್ಯಸ್ಥ ಒಪಿ ಭಟ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಮಿಸ್ತ್ರಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲು ಹಾಗೂ ಸ್ವತಂತ್ರ ನಿರ್ವಹಣೆಯ ನಿರ್ದೇಶಕ ನುಸ್ಲಿ ವಾಡಿಯಾ ಅವರನ್ನು ನಿರ್ದೇಶಕರ ಹುದ್ದೆಯಿಂದಲೂ ವಜಾಗೊಳಿಸುವುದಕ್ಕಾಗಿ ವಿಶೇಷ ಸಭೆಯನ್ನು ನಡೆಸಲು ಆಡಳಿತ ಮಂಡಳಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ವಿಶೇಷ ಪ್ರಧಾನ ಸಭೆ ಡಿ.21 ಕ್ಕೆ ನಡೆಯಲಿದೆ.
ಏಕಾಏಕಿ ನಡೆದಿದ್ದ ಬೆಳವಣಿಗೆಯೊಂದರಲ್ಲಿ ಕಳೆದ ತಿಂಗಳು ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸನ್ಸ್ ಸಂಸ್ಥೆಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ರತನ್ ಟಾಟ ಅವರನ್ನು ನೇಮಕ ಮಾಡಲಾಗಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos