ರೂಪಾಯಿಯನ್ನು ಅಪಮೌಲ್ಯಗೊಳಿಸುವ ಉದ್ದೇಶವಿಲ್ಲ: ಹಣಕಾಸು ಸಚಿವಾಲಯ 
ವಾಣಿಜ್ಯ

ರೂಪಾಯಿಯನ್ನು ಅಪಮೌಲ್ಯಗೊಳಿಸುವ ಉದ್ದೇಶವಿಲ್ಲ: ಹಣಕಾಸು ಸಚಿವಾಲಯ

ರೂಪಾಯಿ ಅಪಮೌಲ್ಯೀಕರಣದ ಬಗ್ಗೆ ವರದಿಗಳು ಪ್ರಕಟವಾಗುತ್ತಿದ್ದಂತೆಯೇ ರೂಪಾಯಿ ಮೌಲ್ಯ ಇಳಿಕೆಯಾಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ ಹಣಕಾಸು ಸಚಿವಾಲಯ, ರೂಪಾಯಿಯನ್ನು ಅಪಮೌಲ್ಯಗೊಳಿಸುವ ಪ್ರಸ್ತಾವನೆ ಇಲ್ಲ ಎಂದು ಹೇಳಿದೆ.

ನವದೆಹಲಿ: ರೂಪಾಯಿ ಅಪಮೌಲ್ಯೀಕರಣದ ಬಗ್ಗೆ ವರದಿಗಳು ಪ್ರಕಟವಾಗುತ್ತಿದ್ದಂತೆಯೇ ರೂಪಾಯಿ ಮೌಲ್ಯ ಇಳಿಕೆಯಾಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ ಹಣಕಾಸು ಸಚಿವಾಲಯ, ರೂಪಾಯಿಯನ್ನು ಅಪಮೌಲ್ಯಗೊಳಿಸುವ ಪ್ರಸ್ತಾವನೆ ಇಲ್ಲ ಎಂದು ಹೇಳಿದೆ.

ಕಳೆದ ಕೆಲವು ತಿಂಗಳುಗಳಿಂದ ರಪ್ತು ಪ್ರಮಾಣ ಇಳಿಕೆಯಾಗುತ್ತಿದ್ದು, ಇದರಿಂದ ಹೊರಬರಲು ರೂಪಾಯಿ ಅಪಮೌಲ್ಯಗೊಳಿಸುವ ಬಗ್ಗೆ ವಾಣಿಜ್ಯ ಸಚಿವಾಲಯ ಹಣಕಾಸು ಸಚಿವಾಲಯದೊಂದಿಗೆ ಚರ್ಚೆ ನಡೆಸಲಿದೆ ಎಂಬ ಬಗ್ಗೆ ವರದಿಗಳು ಪ್ರಕಟವಾಗಿದ್ದವು. ರಫ್ತು ಪ್ರಮಾಣ ಹೆಚ್ಚಿಸುವುದಕ್ಕೆ ವಾಣಿಜ್ಯ ಸಚಿವಾಲಯ ಕ್ರಮ ಕೈಗೊಳ್ಳಲಿದೆ. ಆದರೆ ರೂಪಾಯಿ ಮೌಲ್ಯವನ್ನು ಅಪಮೌಲ್ಯಗೊಳಿಸುವ ಪ್ರಸ್ತಾವನೆ ಇಲ್ಲ ಎಂದು ಹಣಕಾಸು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  

ರಫ್ತು ಉದ್ಯಮ ಹೊಂದಿರುವವರು ಈ ಬಗ್ಗೆ ವಾಣಿಜ್ಯ ಸಚಿವಾಲಯಕ್ಕೆ ಮನವಿ ಮಾಡಿರಬಹುದು, ಆದರೆ ನಮ್ಮ ಕಡೆಯಿಂದ ಚರ್ಚೆ ಮಾಡುವಂತಹ ಅಗತ್ಯವಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇನ್ನು ಈ ಬಗ್ಗೆ ವಾಣಿಜ್ಯ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಸಹ ಸ್ಪಷ್ಟನೆ ನೀಡಿದ್ದು ರೂಪಾಯಿಯನ್ನು ಅಪಮೌಲ್ಯಗೊಳಿಸುವ ವಿಚಾರದ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ನಡೆಸಿಲ್ಲ ಎಂದು ಹೇಳಿದ್ದಾರೆ. ರೂಪಾಯಿ ಅಪಮೌಲ್ಯಗೊಳಿಸುವ ವಿಚಾರ ಆಧಾರ ರಹಿತ ಹಾಗೂ ಅಪ್ರಸ್ತುತ ಎಂದು ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT