ಜಿಯೋ 
ವಾಣಿಜ್ಯ

ಜಿಯೋ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಸಮ್ಮರ್ ಸರ್ ಪ್ರೈಸ್ ಆಫರ್ ಗೆ ಖೋತಾ

ಜಿಯೋ ಗ್ರಾಹಕರಿದೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ. ಸಮ್ಮರ್ ಸರ್ ಪ್ರೈಸ್ ಆಫರ್‍ನಲ್ಲಿ ಉಚಿತ ಡೇಟಾವನ್ನು ಪಡೆಯುತ್ತಿದ್ದವರು ಇನ್ನು ಮುಂದೆ ಜಿಯೋ ಸೇವೆ ...

ನವದೆಹಲಿ: ಜಿಯೋ ಗ್ರಾಹಕರಿದೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ. ಸಮ್ಮರ್ ಸರ್ ಪ್ರೈಸ್ ಆಫರ್‍ನಲ್ಲಿ ಉಚಿತ ಡೇಟಾವನ್ನು ಪಡೆಯುತ್ತಿದ್ದವರು ಇನ್ನು ಮುಂದೆ ಜಿಯೋ ಸೇವೆ ಬಳಸಬೇಕಾದರೆ ಹಣವನ್ನು ಪಾವತಿ ಮಾಡಲೇಬೇಕು.
ಸಮ್ಮರ್ ಸರ್‍ಪ್ರೈಸ್ ಆಫರ್ ಹೆಸರಿನಲ್ಲಿ ಗ್ರಾಹಕರಿಗೆ ಆಫರ್ ನೀಡುತ್ತಿದ್ದ ಜಿಯೋ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಸಲಹೆಯ ಹಿನ್ನೆಲೆಯಲ್ಲಿ ಈ ಆಫರ್ ಹಿಂಪಡೆದಿದೆ. 
ಟ್ರಾಯ್ ಸಲಹೆಯ ಮೇರೆಗೆ ನಾವು 3 ತಿಂಗಳ ಸಮ್ಮರ್ ಸರ್‍ಪ್ರೈಸ್ ಆಫರ್ ಹಿಂದಕ್ಕೆ ಪಡೆಯುತ್ತಿದ್ದೇವೆ. ಟ್ರಾಯ್ ಸಲಹೆಗೆ ನಾವು ಬದ್ಧರಾಗಿದ್ದೇವೆ. ಆದರೆ ಯಾರೆಲ್ಲ ಸಮ್ಮರ್ ಸರ್ ಪ್ರೈಸ್ ಆಫರ್ ರಿಚಾರ್ಜ್ ಮಾಡಿದ್ದಾರೋ ಅವರು ಸದ್ಯಕ್ಕೆ ಈ ಆಫರ್‍ನಲ್ಲೇ ಮುಂದುವರೆಯಲಿದ್ದಾರೆ ಪ್ರಕಟಣೆಯಲ್ಲಿ ತಿಳಿಸಿದೆ.
ಮಾರ್ಚ್ 31ರಂದು ಜಿಯೋ ಸಮ್ಮರ್ ಆಫರ್ ಘೋಷಿಸಿದ್ದ ಜಿಯೋ ಸಂಸ್ಥೆ, ತನ್ನಲ್ಲಿ ಪ್ರೈಮ್ ಸದಸ್ಯತ್ವ ಪಡೆದ ತನ್ನ ಗ್ರಾಹಕರು 303 ರು. ಗಳಿಗೆ ರೀಚಾರ್ಜ್ ಮಾಡಿಸಿದರೆ ಸಾಕು ಅವರು ಮೂರು ತಿಂಗಳ ಕಾಲ ಉಚಿತವಾಗಿ ಕರೆ ಹಾಗೂ ಡೇಟಾ ಸೌಕರ್ಯ ಪಡೆಯಬಹುದಾಗಿತ್ತು.

ಆದರೆ, ಈ ಸೌಲಭ್ಯವನ್ನು ಜಿಯೋ ಹಿಂಪಡೆದಿದ್ದು, 303 ಹಾಗೂ ಅದಕ್ಕಿಂತ ಹೆಚ್ಚು ರು.ಗಳ ರೀಚಾರ್ಜ್ ಮಾಡಿಸುವವರು, ಇತರ ನೆಟ್ ವರ್ಕ್ ಗಳಂತೆ ಕೇವಲ 30 ದಿನಗಳಿಗೆ ಮಾತ್ರ ಜಿಯೋ ಸೌಲಭ್ಯ ಪಡೆಯಲಿದ್ದಾರೆ.  ಆದರೆ, ಪ್ರೈಮ್ ಸದಸ್ಯತ್ವ ಪಡೆದು 303 ಹಾಗೂ ಅದಕ್ಕಿಂತ ಮೇಲ್ಪಟ್ಟ ದರಗಳಲ್ಲಿ ರೀಚಾರ್ಜ್ ಮಾಡಿಸಿ ಸಮ್ಮರ್ ಆಫರ್ ನಲ್ಲಿ ನೋಂದಾಯಿಸಿಕೊಂಡಿದ್ದ ಗ್ರಾಹಕರಿಗೆ ಈ ಮೊದಲು ಘೋಷಿಸಿದ್ದಂತೆ 3 ತಿಂಗಳ ಉಚಿತ ಡೇಟಾ, ಕರೆ ಆಫರ್ ಮುಂದುವರಿಯಲಿದೆ.

ಜಿಯೋ ಸಮ್ಮರ್ ಆಫರ್ ನಿಮಗೆ ಬೇಕಾದ್ರೆ ಮೊದಲು ನೀವು ಜಿಯೋದ ಯಾವ ಗ್ರಾಹಕರ ವಿಭಾಗದಲ್ಲಿ ಇದ್ದೀರಿ ಎನ್ನುವುದನ್ನು ತಿಳಿದುಕೊಳ್ಳಬೇಕು. ಜಿಯೋದಲ್ಲಿ ಸದ್ಯಕ್ಕೆ ಎರಡು ವರ್ಗದ ಗ್ರಾಹಕರಿದ್ದಾರೆ. ಒಂದನೇಯ ಗ್ರಾಹಕರು 99 ರೂ. ನೀಡಿ ಪ್ರೈಮ್ ಸದಸ್ಯರಾದವರು. 99 ರೂ. ನೀಡದೇ ಈಗಲೂ ಜಿಯೋ ಸೇವೆಯನ್ನು ಬಳಸುತ್ತಿರುವವರು ಎರಡನೇ ವರ್ಗದ ಗ್ರಾಹಕರು. ಹೀಗಾಗಿ ಜಿಯೋ ಸಮ್ಮರ್ ಆಫರ್ ಲಾಭ ನಿಮಗೆ ಬೇಕಿದ್ದಲ್ಲಿ ಮೊದಲು ನೀವು 99 ರೂ. ನೀಡಿ ಜಿಯೋ ಪ್ರೈಮ್ ಸದಸ್ಯರಾಗಬೇಕಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT