ಐಎಂಎಫ್ 
ವಾಣಿಜ್ಯ

ಇತ್ತೀಚಿನ ವರ್ಷಗಳಲ್ಲಿ ಭಾರತ ಉತ್ತಮ ಬೆಳವಣಿಗೆ ದಾಖಲಿಸಿದೆ: ಐಎಂಎಫ್

ಇತ್ತೀಚಿನ ವರ್ಷಗಳಲ್ಲಿ ಭಾರತ ಅತ್ಯುತ್ತಮ ಆರ್ಥಿಕ ಬೆಳವಣಿ ದಾಖಲಿಸಿದ್ದು, ಸರ್ಕಾರದಿಂದ ತೆರಿಗೆ ವಿನಾಯಿತಿಯ ಮಿತಿ ವಿಸ್ತರಣೆಗೆ ಹೆಚ್ಚು ಅವಕಾಶ ಕಲ್ಪಿಸಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಹೇಳಿದೆ.

ವಾಷಿಂಗ್ ಟನ್: ಇತ್ತೀಚಿನ ವರ್ಷಗಳಲ್ಲಿ ಭಾರತ ಅತ್ಯುತ್ತಮ ಆರ್ಥಿಕ ಬೆಳವಣಿ ದಾಖಲಿಸಿದ್ದು, ಸರ್ಕಾರದಿಂದ ತೆರಿಗೆ ವಿನಾಯಿತಿಯ ಮಿತಿ ವಿಸ್ತರಣೆಗೆ ಹೆಚ್ಚು ಅವಕಾಶ ಕಲ್ಪಿಸಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಹೇಳಿದೆ. 
ಭಾರತ ಇತ್ತೀಚಿನ ವರ್ಷಗಳಲ್ಲಿ ಅತ್ಯುತ್ತಮ ಬೆಳವಣಿಗೆಯನ್ನು ದಾಖಲಿಸಿದೆ. ಇಂಧನ ಸಬ್ಸಿಡಿಗಳನ್ನು ಬಿಟ್ಟುಕೊಡಲು ಸಾಧ್ಯವಿರುವವರಿಗೆ ಸಬ್ಸಿಡಿಗಳನ್ನು ನಿಲ್ಲಿಸಿ ಅದನ್ನು ಸಾಮಾಜಿಕ ಉಪಯೋಗಕ್ಕೆ ಬಳಕೆ ಮಾಡಿರುವುದು ಸೇರಿದಂತೆ ಭಾರತ ಸರ್ಕಾರದ ಅನೇಕ ಕ್ರಮಗಳು ಬಜೆಟ್ ನಲ್ಲಿ ಗುರಿ ಹೊಂದಲಾಗಿದ್ದ ಶೇ.3.5 ರಷ್ಟು ಜಿಡಿಪಿಯನ್ನು ಸಾಧಿಸಲು ಸಾಧ್ಯವಾಗಿದೆ ಎಂದು ಐಎಂಎಫ್ ನ ಹಣಕಾಸು ವ್ಯವಹಾರಗಳ ಇಲಾಖೆಯ ನಿರ್ದೇಶಕ ವಿಕ್ಟರ್ ಗಾಸ್ಪರ್ ಹೇಳಿದ್ದಾರೆ.      
ವೆಚ್ಚಗಳನ್ನು ಕ್ರಮಬದ್ಧಗೊಳಿಸುವಿಕೆ ಸೇರಿದಂತೆ ಹಣಕಾಸು ಇಲಾಖೆಗೆ ಸಂಬಂಧಿಸಿದ ರಚನಾತ್ಮಕ ಕ್ರಮಗಳ ಬಗ್ಗೆ ಭಾರತೀಯ ಅಧಿಕಾರಿಗಳೊಂದಿಗೆ ಒಗ್ಗೂಡಿ ಕೆಲಸ ಮಾಡಲಿದ್ದೇವೆ. ದೇಶಾದ್ಯಂತ ಏಕೀಕೃತ ರಾಷ್ಟ್ರೀಯ ಮಾರುಕಟ್ಟೆ ಇರುವುದು ಪ್ರಮುಖವಾಗಲಿದೆ. ಈ ಹಿನ್ನೆಲೆಯಲ್ಲಿ ಜಿಎಸ್ ಟಿ ಜಾರಿ ಮಹತ್ವ ಪಡೆದುಕೊಂಡಿದೆ. ಪರಿಣಾಮವಾಗಿ ತೆರಿಗೆ ವಿನಾಯಿತಿ ಮಿತಿಯನ್ನು ಮತ್ತಷ್ಟು ವಿಸ್ತರಿಸುವುದಕ್ಕೆ ಅವಕಾಶ ಇರಲಿದೆ ಎಂದು ಐಎಂಎಫ್ ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ ರೂ. 8,500 ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು: ವಾರಸುದಾರರಿಗೆ ಪರಿಹಾರ ವಿತರಣೆ- ಸಿಎಂ ಸಿದ್ದರಾಮಯ್ಯ

Gaza deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ: ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ, BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT