ಅರುಣ್ ಜೇಟ್ಲಿ 
ವಾಣಿಜ್ಯ

ಜಿಎಸ್ ಟಿ ದರ ನಿಗದಿಯಲ್ಲಿ ಬದಲಾವಣೆಗಳಿರುವುದಿಲ್ಲ: ಜೇಟ್ಲಿ ಭರವಸೆ

ಜಿಎಸ್ ಟಿ ಜಾರಿಯಿಂದ ತೆರಿಗೆ ದರಗಳಲ್ಲಿ ಬದಲಾವಣೆಗಳಿರುವುದಿಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಭರವಸೆ ನೀಡಿದ್ದಾರೆ.

ನವದೆಹಲಿ: ಜಿಎಸ್ ಟಿ ಜಾರಿಯಿಂದ ತೆರಿಗೆ ದರಗಳಲ್ಲಿ ಬದಲಾವಣೆಗಳಿರುವುದಿಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಭರವಸೆ ನೀಡಿದ್ದಾರೆ. 
ಹೊಸ ಜಿಎಸ್ ಟಿ ಕಾಯ್ದೆ ಜಾರಿಯಾವುದರಿಂದ ಈಗಿನ ತೆರಿಗೆ ದರಗಳು ಬದಲಾವಣೆಯಾಗುವುದಿಲ್ಲ. ಜಿಎಸ್ ಟಿ ಜಾರಿಯಿಂದಾಗಿ ಕೇಂದ್ರ ಹಾಗೂ ರಾಜ್ಯ ತೆರಿಗೆಗಳ ವ್ಯತ್ಯಾಸ ಕೊನೆಗೊಳ್ಳಲಿದೆ. ಆದರೆ ಕಂಪನಿಗಳು ಜಿಎಸ್ ಟಿ ಜಾರಿಯಿಂದಾಗುವ ತೆರಿಗೆ ಕಡಿತದ ಪ್ರಯೋಜನಗಳನ್ನು ಗ್ರಾಹಕರಿಗೆ ತಲುಪಿಸಬೇಕು ಎಂದು ಜೇಟ್ಲಿ ಹೇಳಿದ್ದಾರೆ. 
ವಿವಿಧ ಸರಕುಗಳಿಗೆ ತೆರಿಗೆ ನಿಗದಿ ಮಾಡುವ ಸಲುವಾಗಿ ರಾಜ್ಯಗಳ ಪ್ರತಿನಿಧಿಗಳು ಇರುವ ಅರುಣ್ ಜೇಟ್ಲಿ ನೇತೃತ್ವದ ಜಿಎಸ್ ಟಿ ಕೌನ್ಸಿಲ್ ಸಭೆ ಮೇ 18-19 ರಂದು ನಡೆಯಲಿದ್ದು, ವಿವಿಧ ಸರಕುಗಳಿಗೆ ತೆರಿಗೆ ನಿಗದಿಪಡಿಸುವ ಅಂತಿಮ ಹಂತದಲ್ಲಿ ನಾವಿದ್ದೇವೆ, ಯಾವ ಕ್ರಮದಲ್ಲಿ ತೆರಿಗೆ ನಿಗದಿಪಡಿಸಲಾಗುತ್ತಿದೆ ಎಂಬುದನ್ನೂ ಈಗಾಗಲೇ ವಿವರಣೆ ನೀಡಲಾಗಿದೆ. ಆದ್ದರಿಂದ ಯಾವುದೇ ರೀತಿಯ ಅಚ್ಚರಿಗಳಿರುವುದಿಲ್ಲ, ತೆರಿಗೆ ದರಗಳಲ್ಲಿ ಬದಲಾವಣೆಗಳಿರುವುದಿಲ್ಲ ಎಂದು ಸಿಐಐ ನ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿರುವ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT