ಅರುಣ್ ಜೇಟ್ಲಿ 
ವಾಣಿಜ್ಯ

ಜಿಎಸ್ ಟಿ ದರ ನಿಗದಿಯಲ್ಲಿ ಬದಲಾವಣೆಗಳಿರುವುದಿಲ್ಲ: ಜೇಟ್ಲಿ ಭರವಸೆ

ಜಿಎಸ್ ಟಿ ಜಾರಿಯಿಂದ ತೆರಿಗೆ ದರಗಳಲ್ಲಿ ಬದಲಾವಣೆಗಳಿರುವುದಿಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಭರವಸೆ ನೀಡಿದ್ದಾರೆ.

ನವದೆಹಲಿ: ಜಿಎಸ್ ಟಿ ಜಾರಿಯಿಂದ ತೆರಿಗೆ ದರಗಳಲ್ಲಿ ಬದಲಾವಣೆಗಳಿರುವುದಿಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಭರವಸೆ ನೀಡಿದ್ದಾರೆ. 
ಹೊಸ ಜಿಎಸ್ ಟಿ ಕಾಯ್ದೆ ಜಾರಿಯಾವುದರಿಂದ ಈಗಿನ ತೆರಿಗೆ ದರಗಳು ಬದಲಾವಣೆಯಾಗುವುದಿಲ್ಲ. ಜಿಎಸ್ ಟಿ ಜಾರಿಯಿಂದಾಗಿ ಕೇಂದ್ರ ಹಾಗೂ ರಾಜ್ಯ ತೆರಿಗೆಗಳ ವ್ಯತ್ಯಾಸ ಕೊನೆಗೊಳ್ಳಲಿದೆ. ಆದರೆ ಕಂಪನಿಗಳು ಜಿಎಸ್ ಟಿ ಜಾರಿಯಿಂದಾಗುವ ತೆರಿಗೆ ಕಡಿತದ ಪ್ರಯೋಜನಗಳನ್ನು ಗ್ರಾಹಕರಿಗೆ ತಲುಪಿಸಬೇಕು ಎಂದು ಜೇಟ್ಲಿ ಹೇಳಿದ್ದಾರೆ. 
ವಿವಿಧ ಸರಕುಗಳಿಗೆ ತೆರಿಗೆ ನಿಗದಿ ಮಾಡುವ ಸಲುವಾಗಿ ರಾಜ್ಯಗಳ ಪ್ರತಿನಿಧಿಗಳು ಇರುವ ಅರುಣ್ ಜೇಟ್ಲಿ ನೇತೃತ್ವದ ಜಿಎಸ್ ಟಿ ಕೌನ್ಸಿಲ್ ಸಭೆ ಮೇ 18-19 ರಂದು ನಡೆಯಲಿದ್ದು, ವಿವಿಧ ಸರಕುಗಳಿಗೆ ತೆರಿಗೆ ನಿಗದಿಪಡಿಸುವ ಅಂತಿಮ ಹಂತದಲ್ಲಿ ನಾವಿದ್ದೇವೆ, ಯಾವ ಕ್ರಮದಲ್ಲಿ ತೆರಿಗೆ ನಿಗದಿಪಡಿಸಲಾಗುತ್ತಿದೆ ಎಂಬುದನ್ನೂ ಈಗಾಗಲೇ ವಿವರಣೆ ನೀಡಲಾಗಿದೆ. ಆದ್ದರಿಂದ ಯಾವುದೇ ರೀತಿಯ ಅಚ್ಚರಿಗಳಿರುವುದಿಲ್ಲ, ತೆರಿಗೆ ದರಗಳಲ್ಲಿ ಬದಲಾವಣೆಗಳಿರುವುದಿಲ್ಲ ಎಂದು ಸಿಐಐ ನ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿರುವ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT