ಸಂಗ್ರಹ ಚಿತ್ರ 
ವಾಣಿಜ್ಯ

ತುರ್ತು ಚಿಕಿತ್ಸೆ ವೇಳೆ ಇಪಿಎಫ್ ವಿತ್ ಡ್ರಾಗೆ ವೈದ್ಯರ ಪ್ರಮಾಣ ಪತ್ರ ಬೇಕಿಲ್ಲ!

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಕಾರ್ಮಿಕರ ನೆರವಿಗಾಗಿ ಇಪಿಎಫ್ ಹಣ ವಿತ್ ಡ್ರಾ ನಿಯಮವನ್ನು ಸಡಿಲಗೊಳಿಸಲಾಗಿದ್ದು, ತುರ್ತು ಚಿಕಿತ್ಸೆ ವೇಳೆ ಇಪಿಎಫ್ ವಿತ್ ಡ್ರಾಗೆ ವೈದ್ಯರ ಪ್ರಮಾಣ ಪತ್ರ ಅವಶ್ಯಕತೆ ಇಲ್ಲ ಎಂದು ಕಾರ್ಮಿಕ ಸಚಿವಾಲಯ ಹೇಳಿದೆ.

ನವದೆಹಲಿ: ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಕಾರ್ಮಿಕರ ನೆರವಿಗಾಗಿ ಇಪಿಎಫ್ ಹಣ ವಿತ್ ಡ್ರಾ ನಿಯಮವನ್ನು ಸಡಿಲಗೊಳಿಸಲಾಗಿದ್ದು, ತುರ್ತು ಚಿಕಿತ್ಸೆ ವೇಳೆ ಇಪಿಎಫ್ ವಿತ್ ಡ್ರಾಗೆ ವೈದ್ಯರ ಪ್ರಮಾಣ ಪತ್ರ  ಅವಶ್ಯಕತೆ ಇಲ್ಲ ಎಂದು ಕಾರ್ಮಿಕ ಸಚಿವಾಲಯ ಹೇಳಿದೆ.

ಗಂಭೀರವಾದ ಕಾಯಿಲೆಗಳಿಗೆ ತುರ್ತು ಚಿಕಿತ್ಸೆ ತೆಗೆದುಕೊಳ್ಳಬೇಕಾದ ಸನ್ನಿವೇಶದಲ್ಲಿ ಭವಿಷ್ಯ ನಿಧಿಯ ಹಣ ತೆಗೆದುಕೊಳ್ಳುವುದಕ್ಕೆ ಉದ್ಯೋಗ ಸಂಸ್ಥೆಗಳ ಅನುಮತಿ ಅಥವಾ ವೈದ್ಯರ ಪ್ರಮಾಣಪತ್ರ ಕಡ್ಡಾಯವಲ್ಲ ಎಂದು ಕಾರ್ಮಿಕ  ಸಚಿವಾಲಯವು ಗುರುವಾರ ಅಧಿಸೂಚನೆ ಹೊರಡಿಸಿದೆ. ಹೊಸ ನಿಯಮಾವಳಿ ಪ್ರಕಾರ ಉದ್ಯೋಗಿಗಳು ಕಾಂಪೋಸಿಟ್ ಅರ್ಜಿಯನ್ನು ತುಂಬಿ ತೀರಾ ಗಂಭೀರ ಆರೋಗ್ಯ ಸಮಸ್ಯೆಗೆ ಚಿಕಿತ್ಸೆ ಅಗತ್ಯವಿದ್ದಲ್ಲಿ ಸ್ವಯಂ ಘೋಷಣಾ  ಅರ್ಜಿಯನ್ನು ಸಲ್ಲಿಸಿ, ಭವಿಷ್ಯನಿಧಿಯಿಂದ ಹಣ ತೆಗೆದುಕೊಳ್ಳಬಹುದಾಗಿದೆ.

ಒಂದು ವೇಳೆ ಉದ್ಯೋಗಿಯು ಒಂದು ತಿಂಗಳ ಕಾಲ ಆಸ್ಪತ್ರೆಯಲ್ಲಿರಬೇಕಾದ ಸನ್ನಿವೇಶ ಸೃಷ್ಟಿಯಾದರೆ, ಪ್ರಮುಖ ಶಸ್ತ್ರಚಿಕಿತ್ಸೆ ವೇಳೆ 6 ತಿಂಗಳ ಸಂಬಳದಷ್ಟು ಹಣವನ್ನು ಇಪಿಎಫ್ ನಿಂದ ತೆಗೆಯಬಹುದು. ಟಿಬಿ, ಕುಷ್ಠರೋಗ,  ಪಾರ್ಶ್ವವಾಯು, ಹೃದಯ ಸಂಬಂಧಿ ಸಮಸ್ಯೆ ಹಾಗೂ ಕ್ಯಾನ್ಸರ್ ನಿಂದ ಬಳಲುತ್ತಿರುವವರಿಗೆ ಈ ನಿಯಮ ಅನ್ವಯವಾಗುತ್ತದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ಇನ್ನು ಅಂಗವೈಕಲ್ಯ ಇರುವವರು ವೈದ್ಯರಿಂದ ಪ್ರಮಾಣ ಪತ್ರ ಪಡೆದು, ಅದನ್ನು ಸಲ್ಲಿಸಿದರೆ ಅಗತ್ಯ ಸಲಕರಣೆಗಳನ್ನು ಖರೀದಿಸುವುದಕ್ಕೆ, ಚಿಕಿತ್ಸೆಗಾಗಿ ಹಣ ವಿಥ್ ಡ್ರಾ ಮಾಡಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT