ಬ್ಯಾಂಕ್‌ ಮುಷ್ಕರ 
ವಾಣಿಜ್ಯ

ನಾಳೆ ದೇಶಾದ್ಯಂತ ಬ್ಯಾಂಕ್‌ ಮುಷ್ಕರ

ವಿವಿದ ಬೇಡಿಕೆಗಳಿಗೆ ಒತ್ತಾಯಿಸಿ ಸರ್ಕಾರಿ ಬ್ಯಾಂಕ್‌ಗಳ ನೌಕರರು ಮಂಗಳವಾರ ಒಂದು ದಿನದ ಮುಷ್ಕರ ನಡೆಸಲಿದ್ದಾರೆ,

ಹೊಸದಿಲ್ಲಿ:  ವಿವಿದ ಬೇಡಿಕೆಗಳಿಗೆ ಒತ್ತಾಯಿಸಿ ಸರ್ಕಾರಿ ಬ್ಯಾಂಕ್‌ಗಳ ನೌಕರರು ಮಂಗಳವಾರ ಒಂದು ದಿನದ ಮುಷ್ಕರ ನಡೆಸಲಿದ್ದಾರೆ, ಇದರಿಂದ ನಾಳೆ ಬ್ಯಾಂಕಿಂಗ್‌ ವಹಿವಾಟಿಗೆ ತೊಂದರೆಯಾಗುವ ನಿರೀಕ್ಷೆ ಇದೆ.
ಬ್ಯಾಂಕ್‌ ನೌಕರರ ಸಂಘಟನೆಗಳು ಯುಎಫ್ ಬಿಯು ಸಂಘಟನೆಯ ಆಸರೆಯಲ್ಲಿ ನಾಳೆ ಮುಷ್ಕರ ಹಮ್ಮಿಕೊಳ್ಳಲಾಗಿದೆ.
ಬಹುತೇಕ ಬ್ಯಾಂಕುಗಳು ಇದಾಗಲೇ ತಮ್ಮ ಗ್ರಾಹಕರಿಗೆ ಈ ಮುಷ್ಕರದ ಕುರಿತಂತೆ ಮಾಹಿತಿ ಒದಗಿಸಿದೆ.
ಆದರೆ ಖಾಸಗಿ ಬ್ಯಾಂಕ್‌ಗಳಾಗಿರುವ ಐಸಿಐಸಿಐ ಬ್ಯಾಂಕ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌, ಆ್ಯಕ್ಸಿಸ್‌ ಬ್ಯಾಂಕ್‌, ಕೋಟಕ್‌ ಮಹೀಂದ್ರ ಬ್ಯಾಂಕ್‌ಗಳಲ್ಲಿನ, ಸಾಮಾನ್ಯ ಚೆಕ್‌ ವಟಾವಣೆಯಲ್ಲಿನ ವಿಳಂಬವನ್ನು ಹೊರತು ಪಡಿಸಿದರೆ, ಗ್ರಾಹಕ ಸೇವೆಯಲ್ಲಿ ಯಾವುದೆ ಅಡಚಣೆ ಇರುವುದಿಲ್ಲ.
‘ಮುಖ್ಯ ಕಾರ್ಮಿಕ ಆಯುಕ್ತರ ಸಮ್ಮುಖದಲ್ಲಿ ನಡೆದ ಮಾತುಕತೆ ವಿಫಲವಾಗಿರುವುದರಿಂದ ಮುಷ್ಕರ ನಡೆಸುವುದು ಅನಿವಾರ್ಯವಾಗಿದೆ’ ಎಂದು ‘ಎಐಬಿಒಸಿ’ ‍ಪ್ರಧಾನ ಕಾರ್ಯದರ್ಶಿ ಡಿ. ಟಿ. ಫ್ರಾಂಕೊ ತಿಳಿಸಿದ್ದಾರೆ.
ನೌಕರರ ಬೇಡಿಕೆಗಳನ್ನು ಈಡೇರಿಸುವ ಎಲ್ಲ ಮಾತುಕತೆಗಳು ವಿಫ‌ಲವಾಗಿರುವುದರಿಂದ, ಬ್ಯಾಂಕ್‌ ನೌಕರರ ಸಂಘಟನೆಗಳು ತಾವು ಈಗಾಗಲೇ ಕೊಟ್ಟಿರುವ ನೊಟೀಸಿನ ಪ್ರಕಾರ ಆಗಸ್ಟ್ 22 ರ ಮಂಗಳವಾರ ಮುಷ್ಕರ ನಡೆಸುವುದು ಬಹುತೇಕ ಖಚಿತ ಎನ್ನಲಾಗಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT