ಸಂಗ್ರಹ ಚಿತ್ರ 
ವಾಣಿಜ್ಯ

ಕೂಡಲೇ ಬಾಕಿ ಸಾಲ ಪಾವತಿ ಮಾಡದಿದ್ದರೆ ಸಂಸ್ಥೆ ಮೇಲೆ ಇತರರ ನಿಯಂತ್ರಣ: ಅರುಣ್ ಜೇಟ್ಲಿ ಎಚ್ಚರಿಕೆ

ವಾಣಿಜ್ಯೋದ್ಯಮದ ಉದ್ದೇಶದಿಂದ ಬ್ಯಾಂಕ್ ಗಳಿಂದ ಸಾಲ ಪಡೆದು ಇನ್ನೂ ತೀರಿಸದ ಉದ್ಯಮಿಗಳಿಗೆ ಕೇಂದ್ರ ಸರ್ಕಾರ ಗುರುವಾರ ಖಡಕ್ ಎಚ್ಚರಿಕೆ ನೀಡಿದ್ದು,...

ನವದೆಹಲಿ: ವಾಣಿಜ್ಯೋದ್ಯಮದ ಉದ್ದೇಶದಿಂದ ಬ್ಯಾಂಕ್ ಗಳಿಂದ ಸಾಲ ಪಡೆದು ಇನ್ನೂ ತೀರಿಸದ ಉದ್ಯಮಿಗಳಿಗೆ ಕೇಂದ್ರ ಸರ್ಕಾರ ಗುರುವಾರ ಖಡಕ್ ಎಚ್ಚರಿಕೆ ನೀಡಿದ್ದು, ಸಾಲ ಬಾಕಿ ಪಾವತಿ ಮಾಡದಿದ್ದರೆ ಸಂಸ್ಥೆಯ ಆಡಳಿತ ಜವಾಬ್ದಾರಿಯನ್ನು ಇತರರಿಗೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಈ ಬಗ್ಗೆ ಸ್ವತಃ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಉದ್ಯಮಿಗಳಿಗೆ ಎಚ್ಚರಿಕೆ ನೀಡಿದ್ದು, ಬ್ಯಾಂಕ್ ಗಳಿಂದ ವಾಣಿಜ್ಯ ಉದ್ದೇಶಕ್ಕಾಗಿ ಸಾಲ ಪಡೆದಿರುವ ಉದ್ಯಮಿಗಳು ಇನ್ನೂ ಸಾಲ ಬಾಕಿ ಪಾವತಿ ಮಾಡಿಲ್ಲ. ಪ್ರಸಕ್ತ ಕಂತಿನವರೆಗೂ ಉದ್ಯಮಿಗಳು ಬಾಕಿ ಪಾವತಿ ಮಾಡಲೇ ಬೇಕಿದ್ದು, ಬಾಕಿ ಪಾವತಿ ಮಾಡದಿದ್ದರೆ ಹೊಸ ಬ್ಯಾಂಕ್ ದಿವಾಳಿತನ ಕಾನೂನಿನ ಅನ್ವಯ ಸಂಸ್ಥೆಗಳ ಮೇಲಿನ ನಿಯಂತ್ರಣವನ್ನು ಇತರರಿಗೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮೂಲಗಳ ಪ್ರಕಾರ ದೇಶದಲ್ಲಿ 12 ಪ್ರಮುಖ ಉಧ್ಯಮಿಗಳು ಸುಮಾರು 2 ಲಕ್ಷ ಕೋಟಿ ವರೆಗೂ ಸಾಲ ಬಾಕಿ ಪಾವತಿ ಉಳಿಸಿಕೊಂಡಿದ್ದು, ಇದಲ್ಲದೆ ಸಾಲ ಬಾಕಿ ಉಳಿಸಿಕೊಂಡಿರುವ ಮತ್ತಷ್ಟು ಉಧ್ಯಮಿಗಳನ್ನು ಗುರುತಿಸಲಾಗುತ್ತಿದೆ

ಎಂದು ಕೇಂದ್ರ ವಿತ್ತ ಸಚಿವಾಲಯ ತಿಳಿಸಿದೆ. ಇದೇ ನಿಟ್ಟಿನಲ್ಲಿ ಬ್ಯಾಂಕ್ ಗಳ ಮೇಲಿನ ಸಾಲದ ಒತ್ತಡ ನಿವಾರಣೆಗಾಗಿ ಕೇಂದ್ರ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ಬಾಕಿ ಪಾವತಿ ಉಳಿಸಿಕೊಂಡಿರುವ ಉದ್ಯಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲು ಮುಂದಾಗಿದೆ.

ಒಂದು ವೇಳೆ ಉದ್ಯಮಿಗಳು ಸಾಲ ಬಾಕಿ ಪಾವತಿ ಮಾಡಲು ಸಾಧ್ಯವಾಗದಿದ್ದರೆ ಅವರನ್ನು ಆಡಳಿತ ಮಂಡಳಿಯಿಂದ ಕೆಳಗಿಳಿಸಿ ಅವರ ಸ್ಥಾನಕ್ಕೆ ಅರ್ಹತೆ ಇರುವ ಇತರರನ್ನು ಕೂರಿಸಬೇಕಾಗುತ್ತದೆ ಎಂದು ಜೇಟ್ಲಿ ಹೇಳಿದ್ದಾರೆ. ಇದೇ ವೇಳೆ ಬಾಕಿ ಸಾಲ ಪಾವತಿ ವಿಳಂಬದಿಂದ ಆರ್ಥಿಕ ಅಭಿವೃದ್ಧಿ ಮೇಲೆ ಹೊಡೆತ ಬೀಳುತ್ತಿದೆ ಎಂದು ಅಭಿಪ್ರಾಯ ಪಟ್ಟ ಜೇಟ್ಲಿ, ಸಂಸ್ಥೆಗಳನ್ನು ಯಶಸ್ವಿಯಾಗಿ ನಡೆಸಲಾಗದ ಉದ್ಯಮಿಗಳು ಪಕ್ಕಕ್ಕೆ ಸರಿದು ಇತರರು ಬೆಳೆಯುವಂತೆ ನೋಡಿಕೊಳ್ಳಬೇಕು. ಒಂದು ವೇಳೆ ಅದು ಸಾಧ್ಯವಾಗದಿದ್ದರೆ ಸರ್ಕಾರವೇ ಆ ಕಾರ್ಯ ಮಾಡಬೇಕಾಗುತ್ತದೆ ಎಂದು ಜೇಟ್ಲಿ ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ಕೇಂದ್ರ ಸರ್ಕಾರದ ಬ್ಯಾಂಕ್ ಗಳ ವಿಲೀನ ಕ್ರಮವನ್ನು ಸಮರ್ಥಿಸಿಕೊಂಡ ಜೇಟ್ಲಿ, ಬ್ಯಾಂಕ್ ಗಳ ವಿಲೀನ ಕ್ರಮದಿಂದ ಬ್ಯಾಂಕ್ ಗಳ ಬಂಡವಾಳ ಕೊರತೆ ನೀಗಿಸಿದಂತಾಗುತ್ತದೆ. ಅಂತೆಯೇ ಬ್ಯಾಂಕ್ ಗಳ ದಕ್ಷತೆ ಹೆಚ್ಚಿ, ಸಾಂಸ್ಥಿಕ ಆಡಳಿತದ ಗುಣಮಟ್ಟದಲ್ಲಿ ಚೇತರಿಕೆ ಕಂಡು ಬರುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT