ಅಸೋಚಾಮ್ 
ವಾಣಿಜ್ಯ

ದೆಹಲಿ, ಜಮ್ಮು-ಕಾಶ್ಮೀರದ ಚಿಲ್ಲರೆ ಹಣದುಬ್ಬರ ರಾಷ್ಟ್ರೀಯ ಸರಾಸರಿಗಿಂತ ದುಪ್ಪಟ್ಟು!

ಜನವರಿ ತಿಂಗಳ ಚಿಲ್ಲರೆ ಹಣದುಬ್ಬರ ದರ ಪ್ರಕಟಾವಾಗಿದ್ದು, ದೆಹಲಿ, ಜಮ್ಮು-ಕಾಶ್ಮೀರದ ಚಿಲ್ಲರೆ ಹಣದುಬ್ಬರ ರಾಷ್ಟ್ರೀಯ ಸರಾಸರಿಗಿಂತ ದುಪ್ಪಟ್ಟಾಗಿದೆ ಎಂದು ಅಸೋಚಾಮ್ ಹೇಳಿದೆ.

ನವದೆಹಲಿ: ಜನವರಿ ತಿಂಗಳ ಚಿಲ್ಲರೆ ಹಣದುಬ್ಬರ ದರ ಪ್ರಕಟಾವಾಗಿದ್ದು, ದೆಹಲಿ, ಜಮ್ಮು-ಕಾಶ್ಮೀರದ ಚಿಲ್ಲರೆ ಹಣದುಬ್ಬರ ರಾಷ್ಟ್ರೀಯ ಸರಾಸರಿಗಿಂತ ದುಪ್ಪಟ್ಟಾಗಿದೆ ಎಂದು ಅಸೋಚಾಮ್ ಹೇಳಿದೆ. 
ದೇಶದ ಒಟ್ಟಾರೆ ಹಣದುಬ್ಬರ ದರ ಶೇ.3.17 ರಷ್ಟಿದ್ದರೆ, ದೆಹಲಿ ರಾಜ್ಯವೊಂದರ ಹಣದುಬ್ಬರ ಶೇ.6.32 ರಷ್ಟಿದೆ. ಇನ್ನು ಜಮ್ಮು-ಕಾಶ್ಮೀರದ ಹಣದುಬ್ಬರ ಶೇ. 7.01 ರಷ್ಟು, ಹಿಮಾಚಲ ಪ್ರದೇಶದ ಹಣದುಬ್ಬರ ಶೇ.5.92 ರಷ್ಟಿದೆ ಎಂದು ಅಸೋಚಾಮ್ ತಿಳಿಸಿದೆ.
ದೆಹಲಿ-ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶಗಳಲ್ಲಿ ಹಣದುಬ್ಬರ ದರ ಏರಿಕೆಯಾಗಲು ನೋಟು ನಿಷೇಧದ ಪರಿಣಾಮವೂ ಇರುವ ಸಾಧ್ಯತೆ ಇದೆ ಎಂದು ಅಸೋಚಾಮ್ ನ ಅಧ್ಯಕ್ಷ ಸಂದೀಪ್ ಜಜೋಡಿಯಾ ಅಭಿಪ್ರಾಯಪಟ್ಟಿದ್ದಾರೆ. ನೋಟು ನಿಷೇಧದಿಂದ ಹಣದುಬ್ಬರ ದರ ಏರಿಕೆಯಾಗಿದೆ. ಆದರೆ ರಾಷ್ಟ್ರೀಯ ಸರಾಸರಿಗಿಂತ ದೆಹಲಿಯಲ್ಲಿ ಹಣದುಬ್ಬರ ದರ ಏರಿಕೆಯಾಗಿರುವುದು ಅಚ್ಚರಿ ಮೂಡಿಸಿದೆ ಎಂದು ಜಜೋಡಿಯಾ ಹೇಳಿದ್ದಾರೆ.
ನೋಟು ನಿಷೇಧದಿಂದ ರಾಷ್ಟ್ರ ರಾಜಧಾನಿಯಲ್ಲಿ ಹಾಗೂ ಇತರ ರಾಜ್ಯಗಳಲ್ಲಿ ಬೇಡಿಕೆಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಅಸೋಚಾಮ್ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT