ಉರ್ಜಿತ್ ಪಟೇಲ್ 
ವಾಣಿಜ್ಯ

ಕುಸಿತದ ಹೊರತಾಗಿಯೂ ಭಾರತದ ಜಿಡಿಪಿ ಪುಟಿದೇಳಲಿದೆ: ಆರ್ ಬಿಐ ಗೌರ್ನರ್

ನೋಟು ನಿಷೇಧದಿಂದ ಜಿಡಿಪಿ ದರ ತಾತ್ಕಾಲಿಕವಾಗಿ ಕುಸಿದಿದ್ದರೂ ಮುಂದಿನ ದಿನಗಳಲ್ಲಿ ಪುಟಿದೇಳಲಿದೆ ಎಂದು ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ನೋಟು ನಿಷೇಧದಿಂದ ಜಿಡಿಪಿ ದರ ತಾತ್ಕಾಲಿಕವಾಗಿ ಕುಸಿದಿದ್ದರೂ ಮುಂದಿನ ದಿನಗಳಲ್ಲಿ ಪುಟಿದೇಳಲಿದೆ ಎಂದು ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
ಖಾಸಗಿ ಸುದಿ ವಾಹಿನಿಯಲ್ಲಿ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಉರ್ಜಿತ್ ಪಟೇಲ್, 500, 1000 ರೂ ನೋಟು ನಿಷೇಧ ಭಾರತದ ಜಿಡಿಪಿ ಬೆಳವಣಿಗೆ ಮೇಲೆ ಪರಿಣಾಮ ಬೀರಿರುವುದನ್ನು ಎಲ್ಲರೂ ಒಪ್ಪಿಕೊಳ್ಳುತ್ತಾರೆ. ಆದರೆ 2017-18 ರ ಆರ್ಥಿಕ ವರ್ಷದಲ್ಲಿ ಜಿಡಿಪಿ ಪುಟಿದೇಳಲಿದೆ ಎಂದು ಹೇಳಿದ್ದಾರೆ. 
500, 1000 ರೂ ನೋಟು ನಿಷೇಧ ಪ್ರಕ್ರಿಯೆ ಅತ್ಯಂತ ತ್ವರಿತವಾಗಿ ನಡೆದಿದೆ, ಅದು ನೋಟು ನಿಷೇಧ ಯೋಜನೆಯೂ ಆಗಿತ್ತು ಎಂದು ಉರ್ಜಿತ್ ಪಟೇಲ್ ತಿಳಿಸಿದ್ದಾರೆ. ಕಳೆದ ವಾರ ಪ್ರಸಕ್ತ ಆರ್ಥಿಕ ವರ್ಷದ ಬೆಳವಣಿಗೆಯನ್ನು ಆರ್ ಬಿಐ ಶೇ.7.1 ರಿಂದ ಶೇ.6.9 ಕ್ಕೆ ಇಳಿಸಿತ್ತು. ಆದರೆ 2017-18 ನೇ ಸಾಲಿನಲ್ಲಿ ಶೇ.7.4 ಕ್ಕೆ ಏರಿಕೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT