ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ 
ವಾಣಿಜ್ಯ

ಜಿಎಸ್ ಟಿಯಿಂದ ರಾಜ್ಯಗಳಿಗೆ ಆಗುವ ನಷ್ಟ ಭರಿಸಲು ಮಂಡಳಿ ಸಭೆಯಲ್ಲಿ ತೀರ್ಮಾನ

ಸಂಸತ್ತಿನಲ್ಲಿ ಮಂಡಿಸಬೇಕಾಗಿರುವ ಸರಕು ಮತ್ತು ಸೇವಾ ತೆರಿಗೆ ಕಾನೂನಿನಲ್ಲಿರುವ ಕೆಲವು ಅಡೆತಡೆ...

ಮುಂಬೈ: ಸಂಸತ್ತಿನಲ್ಲಿ ಮಂಡಿಸಬೇಕಾಗಿರುವ ಸರಕು ಮತ್ತು ಸೇವಾ ತೆರಿಗೆ ಕಾನೂನಿನಲ್ಲಿರುವ ಕೆಲವು ಅಡೆತಡೆಗಳನ್ನು ತೆರವುಗೊಳಿಸಲು ಕೆಲವು ಪ್ರಮುಖ ಕಾನೂನುಗಳನ್ನು ಜಾರಿಗೆ ತರಲು ಸರಕು ಮತ್ತು ಸೇವಾ ತೆರಿಗೆ ಮಂಡಳಿ ಶನಿವಾರ ಒಪ್ಪಿಗೆ ನೀಡಿದೆ.
ಜುಲೈ 1ರಿಂದ ಸರಕು ಮತ್ತು ಸೇವಾ ತೆರಿಗೆಯನ್ನು ಜಾರಿಗೆ ತರಲು ಯೋಜಿಸಲಾಗಿದ್ದು, ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಅದಕ್ಕೆ ಸಂಬಂಧಪಟ್ಟಂತೆ ಕಾನೂನು ಜಾರಿಗೆ ತರುವ ಉದ್ದೇಶವಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. 
ನಿನ್ನೆ ರಾಜಸ್ತಾನದ ಉದಯ್ ಪುರ್ ನಲ್ಲಿ ನಡೆದ ಸರಕು ಮತ್ತು ಸೇವಾ ತೆರಿಗೆ ಮಂಡಳಿ ಸಭೆಯಲ್ಲಿ ತೆರಿಗೆ ಜಾರಿಯಿಂದ ರಾಜ್ಯಗಳಿಗೆ ಉಂಟಾಗುವ ನಷ್ಟವನ್ನು ಕೇಂದ್ರ ಸರ್ಕಾರ ಭರಿಸಲು ಕಾನೂನು ಜಾರಿಗೆ ಒಪ್ಪಿಗೆ ನೀಡಲಾಯಿತು.
ಪರಿಹಾರ ಮಸೂದೆಯನ್ನು ಬಜೆಟ್ ಅಧಿವೇಶನದಲ್ಲಿ ಮಂಡಿಸುವ ಯೋಜನೆ ಸರ್ಕಾರಕ್ಕಿದೆ. ಮಾರ್ಚ್ 4 ಮತ್ತು 5ರಂದು ಮಂಡಳಿ ಮತ್ತೆ ಸಭೆ ನಡೆಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT