ಸಾಂದರ್ಭಿಕ ಚಿತ್ರ 
ವಾಣಿಜ್ಯ

ಗ್ರಾಮೀಣ ಭಾಗಕ್ಕೆ ಶೇ.40ರಷ್ಟು ನೋಟು ಪೂರೈಕೆ ಮಾಡಿ: ಬ್ಯಾಂಕ್ ಗಳಿಗೆ ಆರ್‌ಬಿಐ ಸೂಚನೆ

500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿ 50 ದಿನ ಕಳೆದರೂ ಜನ ಇನ್ನೂ ನಗದು ಬಿಕ್ಕಟ್ಟು ಎದುರಿಸುತ್ತಿದ್ದು, ...

ಮುಂಬೈ: 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿ 50 ದಿನ ಕಳೆದರೂ ಜನ ಇನ್ನೂ ನಗದು ಬಿಕ್ಕಟ್ಟು ಎದುರಿಸುತ್ತಿದ್ದು, ಗ್ರಾಮೀಣ ಭಾಗದ ರೈತರು ಮತ್ತು ಬಡವರ ಸಂಕಷ್ಟಗಳನ್ನು ನಿವಾರಿಸುವ ನಿಟ್ಟಿನಲ್ಲಿ ಆರ್ ಬಿಐ ಗ್ರಾಮೀಣ ಭಾಗಗಳಿಗೆ ಶೇ.40ರಷ್ಟು ಕರೆನ್ಸಿ ನೋಟುಗಳನ್ನು ಪೂರೈಸುವಂತೆ ಬ್ಯಾಂಕುಗಳಿಗೆ ಸೂಚನೆ ನೀಡಿದೆ.
ನೋಟು ವಿನಿಮಯದ 50 ದಿನಗಳ ಗಡುವು ಮುಗಿದಿರುವ ಹೊರತಾಗಿಯೂ ದೇಶದ ವಿವಿಧೆಡೆಗಳಲ್ಲಿ, ವಿಶೇಷವಾಗಿ ರೈತರು ಮತ್ತು ಬಡವರಿಗೆ, ನಗದು ಕೊರತೆಯು ತೀವ್ರವಾಗಿ ಬಾಧಿಸುತ್ತಿದೆ. ಇದರ ಪರಿಣಾಮವಾಗಿ ಸರಕಾರ, ಜನರು ಬ್ಯಾಂಕುಗಳಿಂದ  ವಾರಕ್ಕೆ 24,000 ರು.ಗಳ ಹಿಂಪಡೆಯುವ ಮಿತಿಯನ್ನು ತೆರವು ಗೊಳಿಸಿಲ್ಲ.
ಸ್ಥಳೀಯ ಅಗತ್ಯಗಳಿಗೆ ತಕ್ಕಂತೆ ನೋಟುಗಳನ್ನು ಗ್ರಾಮೀಣ ಭಾಗಗಳಿಗೆ ಪೂರೈಸದಿರುವುದನ್ನು ಗಮನಿಸಿ ಆರ್‌ ಬಿ ಐ, ಬ್ಯಾಂಕುಗಳಿಗೆ ಶೇ.40ರಷ್ಟು ಪ್ರಮಾಣದಲ್ಲಿ ನೋಟುಗಳನ್ನು ಗ್ರಾಮೀಣ ಭಾಗಗಳಿಗೆ ಪೂರೈಸುವಂತೆ ಆದೇಶ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT