ಸಾಂದರ್ಭಿಕ ಚಿತ್ರ 
ವಾಣಿಜ್ಯ

ಗ್ರಾಮೀಣ ಭಾಗಕ್ಕೆ ಶೇ.40ರಷ್ಟು ನೋಟು ಪೂರೈಕೆ ಮಾಡಿ: ಬ್ಯಾಂಕ್ ಗಳಿಗೆ ಆರ್‌ಬಿಐ ಸೂಚನೆ

500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿ 50 ದಿನ ಕಳೆದರೂ ಜನ ಇನ್ನೂ ನಗದು ಬಿಕ್ಕಟ್ಟು ಎದುರಿಸುತ್ತಿದ್ದು, ...

ಮುಂಬೈ: 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿ 50 ದಿನ ಕಳೆದರೂ ಜನ ಇನ್ನೂ ನಗದು ಬಿಕ್ಕಟ್ಟು ಎದುರಿಸುತ್ತಿದ್ದು, ಗ್ರಾಮೀಣ ಭಾಗದ ರೈತರು ಮತ್ತು ಬಡವರ ಸಂಕಷ್ಟಗಳನ್ನು ನಿವಾರಿಸುವ ನಿಟ್ಟಿನಲ್ಲಿ ಆರ್ ಬಿಐ ಗ್ರಾಮೀಣ ಭಾಗಗಳಿಗೆ ಶೇ.40ರಷ್ಟು ಕರೆನ್ಸಿ ನೋಟುಗಳನ್ನು ಪೂರೈಸುವಂತೆ ಬ್ಯಾಂಕುಗಳಿಗೆ ಸೂಚನೆ ನೀಡಿದೆ.
ನೋಟು ವಿನಿಮಯದ 50 ದಿನಗಳ ಗಡುವು ಮುಗಿದಿರುವ ಹೊರತಾಗಿಯೂ ದೇಶದ ವಿವಿಧೆಡೆಗಳಲ್ಲಿ, ವಿಶೇಷವಾಗಿ ರೈತರು ಮತ್ತು ಬಡವರಿಗೆ, ನಗದು ಕೊರತೆಯು ತೀವ್ರವಾಗಿ ಬಾಧಿಸುತ್ತಿದೆ. ಇದರ ಪರಿಣಾಮವಾಗಿ ಸರಕಾರ, ಜನರು ಬ್ಯಾಂಕುಗಳಿಂದ  ವಾರಕ್ಕೆ 24,000 ರು.ಗಳ ಹಿಂಪಡೆಯುವ ಮಿತಿಯನ್ನು ತೆರವು ಗೊಳಿಸಿಲ್ಲ.
ಸ್ಥಳೀಯ ಅಗತ್ಯಗಳಿಗೆ ತಕ್ಕಂತೆ ನೋಟುಗಳನ್ನು ಗ್ರಾಮೀಣ ಭಾಗಗಳಿಗೆ ಪೂರೈಸದಿರುವುದನ್ನು ಗಮನಿಸಿ ಆರ್‌ ಬಿ ಐ, ಬ್ಯಾಂಕುಗಳಿಗೆ ಶೇ.40ರಷ್ಟು ಪ್ರಮಾಣದಲ್ಲಿ ನೋಟುಗಳನ್ನು ಗ್ರಾಮೀಣ ಭಾಗಗಳಿಗೆ ಪೂರೈಸುವಂತೆ ಆದೇಶ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT