ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಬ್ ಕಾಂತ್ 
ವಾಣಿಜ್ಯ

2020ರ ವೇಳೆಗೆ ಭಾರತದಲ್ಲಿ ಕಾರ್ಡು,ಎಟಿಎಂಗಳು ತ್ಯಾಜ್ಯಗಳಾಗುತ್ತವೆ: ನೀತಿ ಆಯೋಗ

ಅಧಿಕ ಮೌಲ್ಯದ ನೋಟುಗಳ ಚಲಾವಣೆ ಹಿಂತೆಗೆತದ ನಂತರ ಕೇಂದ್ರ ಸರ್ಕಾರ ಡಿಜಿಟಲ್ ವಹಿವಾಟಿಗೆ...

ಬೆಂಗಳೂರು: ಅಧಿಕ ಮೌಲ್ಯದ ನೋಟುಗಳ ಚಲಾವಣೆ ಹಿಂತೆಗೆತದ ನಂತರ ಕೇಂದ್ರ ಸರ್ಕಾರ ಡಿಜಿಟಲ್ ವಹಿವಾಟಿಗೆ ಪ್ರಾಮುಖ್ಯತೆ ನೀಡುತ್ತಿರುವ ಸಂದರ್ಭದಲ್ಲಿ, ಕಾರ್ಡುಗಳು, ಎಟಿಎಂ ಮತ್ತು ಪಾಯಿಂಟ್ ಆಫ್ ಸೇಲ್ ಯಂತ್ರಗಳು 2020ರ ವೇಳೆಗೆ ತ್ಯಾಜ್ಯಗಳಾಗಲಿವೆ ಎಂದು ಬದಲಾವಣೆಯ ಭಾರತೀಯ ರಾಷ್ಟ್ರೀಯ ಸಂಸ್ಥೆ(ನೀತಿ) ಆಯೋಗದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮಿತಾಬ್ ಕಾಂತ್ ಹೇಳಿದ್ದಾರೆ.
ಹಣಕಾಸು ತಂತ್ರಜ್ಞಾನ ಮತ್ತು ಸಾಮಾಜಿಕ ಸಂಶೋಧನೆಯ ವಿಷಯದಲ್ಲಿ ಅಧಿಕ ಅಡ್ಡಿ, ತೊಂದರೆಗಳ ಮಧ್ಯೆ ಭಾರತದಲ್ಲಿದ್ದು, ಈ ಅಡ್ಡಿ, ಆತಂಕಗಳನ್ನು ಮೀರಿ ಭಾರತ ಪುಟಿದೇಳಲಿದೆ ಎಂದರು.
ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರವಾಸಿ ಭಾರತೀಯ ದಿವಸ್ ನಲ್ಲಿ ಮಾತನಾಡಿದ ಅವರು, 2020ರ ವೇಳೆಗೆ ಭಾರತದಲ್ಲಿ ಎಲ್ಲಾ ಡೆಬಿಟ್, ಕ್ರೆಡಿಟ್ ಕಾರ್ಡುಗಳು, ಎಟಿಎಂ, ಪಾಯಿಂಟ್ ಆಫ್ ಸೇಲ್ ಯಂತ್ರಗಳು ಸಂಪೂರ್ಣವಾಗಿ ಅಪ್ರಸ್ತುತವಾಗಲಿದೆ ಎಂದರು.
ಈ ಎಲ್ಲಾ ಯಂತ್ರಗಳು, ಕಾರ್ಡುಗಳು ಭಾರತದಲ್ಲಿ ಇನ್ನು ನಾಲ್ಕೈದು ವರ್ಷಗಳಲ್ಲಿ ತ್ಯಾಜ್ಯಗಳಾಗಲಿವೆ. ಇಂದು ಬಹುತೇಕರು ತಮ್ಮ ಹೆಬ್ಬೆರಳು ಮೂಲಕ ನಿಮಿಷಗಳಲ್ಲಿ ವಹಿವಾಟು ನಡೆಸುತ್ತಾರೆ. ಅವರು ಯುವ ಪ್ರವಾಸಿ ಭಾರತೀಯ ದಿವಸದಲ್ಲಿ ಸ್ಟಾರ್ಟ್ ಅಪ್ಸ್ ಮತ್ತು ಸಂಶೋಧನೆಗಳಿಂದ ಭಾರತದಲ್ಲಿ ಸಾಮಾಜಿಕ ಪರಿಣಾಮ ವಿಷಯದಡಿ ಮಾತನಾಡಿದರು.
ನೋಟುಗಳ ಚಲಾವಣೆ ರದ್ದು ಮತ್ತು ಡಿಜಿಟಲ್ ಪಾವತಿಯಂತಹ ಪ್ರಯತ್ನಗಳ ನಂತರವೂ ಕೇವಲ ಶೇಕಡಾ 2ರಿಂದ 2.5ರಷ್ಟು ಮಂದಿ ಭಾರತೀಯರು ತೆರಿಗೆ ಪಾವತಿಸುತ್ತಿದ್ದಾರೆ. ಹಾಗಾಗಿ ಭಾರತೀಯರು ಅನೌಪಚಾರಿಕತೆಯಿಂದ ಔಪಚಾರಿಕ ಆರ್ಥಿಕತೆಯತ್ತ ಹೊರಳುವ ಅಗತ್ಯವಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT