ಅರುಣ್ ಜೇಟ್ಲಿ 
ವಾಣಿಜ್ಯ

ನೋಟುಗಳ ಚಲಾವಣೆ ಹಿಂತೆಗೆತದಿಂದ ಹಣದ ಅನಾಮಧೇಯತೆ ಕಳೆದುಕೊಂಡಿದೆ: ಅರುಣ್ ಜೇಟ್ಲಿ

ಹಳೆಯ ಅಧಿಕ ಮೌಲ್ಯದ ನೋಟುಗಳ ಚಲಾವಣೆ ಹಿಂತೆಗೆತದಿಂದ ಕಪ್ಪು ಹಣ ಸಂಗ್ರಹವನ್ನು ಹೊಡೆದೋಡಿಸಬಹುದು ಎಂಬ...

ನವದೆಹಲಿ: ಹಳೆಯ ಅಧಿಕ ಮೌಲ್ಯದ ನೋಟುಗಳ ಚಲಾವಣೆ ಹಿಂತೆಗೆತದಿಂದ ಕಪ್ಪು ಹಣ ಸಂಗ್ರಹವನ್ನು ಹೊಡೆದೋಡಿಸಬಹುದು ಎಂಬ ಬಗ್ಗೆ ವ್ಯಕ್ತಪಡಿಸುವ ಸಂಶಯಕ್ಕೆ ಪ್ರತಿಕ್ರಿಯಿಸಿರುವ ಹಣಕಾಸು ಸಚಿವ ಅರುಣ್ ಜೇಟ್ಲಿ, ಹಣವನ್ನು ಬ್ಯಾಂಕಿನಲ್ಲಿ ಇಡುವುದರಿಂದ ಅದರ ಬಣ್ಣ ಬದಲಾಗುವುದಿಲ್ಲ. ಬದಲಿಗೆ ಅನಾಮಧೇಯ ಹಣವನ್ನು ಗುರುತಿಸಿ ಅದರ ಮಾಲಿಕರನ್ನು ಪತ್ತೆಹಚ್ಚಬಹುದು ಎಂದು ಹೇಳಿದ್ದಾರೆ.
'ನೋಟುಗಳ ಚಲಾವಣೆ ಹಿಂತೆಗೆತ-ಎರಡು ತಿಂಗಳ ಹಿನ್ನೋಟ' ಕುರಿತು ಫೇಸ್ ಬುಕ್ ನಲ್ಲಿ ಹೇಳಿಕೆಯನ್ನು ಅವರು ಪೋಸ್ಟ್ ಮಾಡಿ, ಜನರು ಅನುಭವಿಸಿದ ನೋವು ಮತ್ತು ಅನನುಕೂಲತೆ ದೂರವಾಗಿದ್ದು ಆರ್ಥಿಕ ಚಟುವಟಿಕೆಗಳು ಮತ್ತೆ ಮರು ಸ್ಥಾಪನೆಯಾಗುತ್ತಿವೆ ಎಂದರು.
ಬ್ಯಾಂಕುಗಳಿಗೆ ಹೆಚ್ಚಿನ ಹಣ ಹರಿದುಬಂದರೆ ಕಡಿಮೆ ಬಡ್ಡಿ ಸಿಗುತ್ತದೆ ಎಂದು ಕೂಡ ಹೇಳಿದ್ದಾರೆ.
ದೇಶದಲ್ಲಿ ಚಲಾವಣೆಯಲ್ಲಿರುವ ಒಟ್ಟಾರೆ ಹಣದಲ್ಲಿ ಶೇಕಡಾ 86ರಷ್ಟು ಬಿಳಿ ಹಣವಾದರೆ, ಶೇಕಡಾ 12.2 ಕಪ್ಪು ಹಣವಾಗಿದ್ದು ಮಾರುಕಟ್ಟೆಯಿಂದ ಹೊರ ಬಿದ್ದಿದೆ. ನೋಟುಗಳ ಚಲಾವಣೆ ಹಿಂತೆಗೆತ ಒಂದು ಮಹತ್ವಪೂರ್ಣ ನಿರ್ಧಾರವಾಗಿದ್ದು, ಬ್ಯಾಂಕುಗಳ ಹೊರಗೆ ಸರದಿ ಸಾಲು ಕಣ್ಮರೆಯಾಗಿದೆ ಮತ್ತು ಮತ್ತೆ ಹಣಗಳಿಕೆ ಮುಂದೆ ಸಾಗಿದೆ. ಆರ್ಥಿಕ ಚಟುವಟಿಕೆಗಳು ಮರುಕಳಿಸಿವೆ ಎನ್ನುತ್ತಾರೆ.
ನೋಟುಗಳ ಚಲಾವಣೆ ಹಿಂತೆಗೆತಕ್ಕೆ ಧೈರ್ಯ ಮತ್ತು ಶಕ್ತಿ ಎರಡೂ ಬೇಕಾಗಿದ್ದವು. ನಿರ್ಧಾರವನ್ನು ಜಾರಿಗೆ ತರುವುದು ತುಂಬಾ ನೋವಿನ ವಿಷಯವಾಗಿತ್ತು. ಅದಕ್ಕೆ ಸಾಕಷ್ಟು ಟೀಕೆ, ವಿರೋಧ, ಅನನುಕೂಲತೆಗಳು ಎದುರಾದವು, ಆದರೆ ಅವು ತಾತ್ಕಾಲಿಕವಾಗಿತ್ತು ಎಂದು ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಕಪ್ಪು ಹಣವನ್ನು ಬ್ಯಾಂಕಿನಲ್ಲಿ ಠೇವಣಿಯಿಡುವುದರಿಂದ ಅದರ ಬಣ್ಣ ಬದಲಾಗುವುದಿಲ್ಲ. ಅದರ ಬದಲಾಗಿ ಅದು ಅನಾಮಧೇಯತೆಯಿಂದ ಹೊರಬಂದು ಅದರ ಮಾಲಿಕರು ಯಾರು ಎಂದು ಗೊತ್ತಾಗುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT