ಸಾಂದರ್ಭಿಕ ಚಿತ್ರ 
ವಾಣಿಜ್ಯ

2016,ಏ. 1ರಿಂದ ನ. 9ರವರೆಗಿನ ಉಳಿತಾಯ ಠೇವಣಿ ವರದಿ ನೀಡಲು ಐಟಿ ಇಲಾಖೆ ಬ್ಯಾಂಕು, ಅಂಚೆ ಕಚೇರಿಗಳಿಗೆ ಸೂಚನೆ

2016 ಏಪ್ರಿಲ್ 1ರಿಂದ ನವೆಂಬರ್ 9ರವರೆಗೆ ಬ್ಯಾಂಕುಗಳ ಉಳಿತಾಯ ಖಾತೆಗಳಲ್ಲಿ ಠೇವಣಿಯಾಗಿರುವ ಹಣದ ಬಗ್ಗೆ ಲೆಕ್ಕ...

ನವದೆಹಲಿ: 2016 ಏಪ್ರಿಲ್ 1ರಿಂದ ನವೆಂಬರ್ 9ರವರೆಗೆ ಬ್ಯಾಂಕುಗಳ ಉಳಿತಾಯ ಖಾತೆಗಳಲ್ಲಿ ಠೇವಣಿಯಾಗಿರುವ ಹಣದ ಬಗ್ಗೆ ಲೆಕ್ಕ ನೀಡುವಂತೆ ಆದಾಯ ತೆರಿಗೆ ಇಲಾಖೆ ಬ್ಯಾಂಕುಗಳಿಗೆ ಸೂಚಿಸಿದೆ.
ನವೆಂಬರ್ 8ರಂದು ಅಧಿಕ ಮೌಲ್ಯದ ನೋಟುಗಳ ಚಲಾವಣೆ ಹಿಂತೆಗೆತದ ನಂತರ ಪ್ರತಿ ತಿಂಗಳು ಬ್ಯಾಂಕುಗಳಲ್ಲಿ ಆದ ಹಣದ ವಹಿವಾಟುಗಳನ್ನು ವಿಶ್ಲೇಷಿಸಲು ಆದಾಯ ತೆರಿಗೆ ಇಲಾಖೆ ಈ ಕ್ರಮ ಕೈಗೊಂಡಿದೆ.
ಅಲ್ಲದೆ ಬ್ಯಾಂಕುಗಳಿಗೆ ಪ್ಯಾನ್ ಸಂಖ್ಯೆ ಒದಗಿಸದ ಅಥವಾ ಖಾತೆ ತೆರೆಯುವ ಸಂದರ್ಭದಲ್ಲಿ ಅರ್ಜಿ ಸಂಖ್ಯೆ 60 ನೀಡದ ಖಾತೆದಾರರು ಈ ವರ್ಷ ಫೆಬ್ರವರಿ 28ರೊಳಗೆ ನೀಡುವಂತೆ ಕೂಡ ಬ್ಯಾಂಕುಗಳು ಗ್ರಾಹಕರಿಗೆ ನಿರ್ದೇಶನ ನೀಡಬೇಕೆಂದು ಹೇಳಿದೆ.
ಅಧಿಸೂಚನೆ ಪ್ರಕಾರ, ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು ಮತ್ತು ಅಂಚೆ ಕಚೇರಿಗಳು ಕಳೆದ ವರ್ಷ ಏಪ್ರಿಲ್ 1ರಿಂದ ನವೆಂಬರ್ 9ರವರೆಗೆ ಮಾಡಿದ ಎಲ್ಲಾ ಠೇವಣಿ ಸಂಗ್ರಹದ ವಿವರಗಳನ್ನು ಆದಾಯ ತೆರಿಗೆ ಇಲಾಖೆಗೆ ನೀಡಬೇಕು.
ಅಲ್ಲದೆ ಠೇವಣಿದಾರರಿಂದ ಪಾನ್ ಸಂಖ್ಯೆ ಅಥವಾ ಅರ್ಜಿ ಸಂಖ್ಯೆ 60ರಡಿ ತೆರೆದ ಖಾತೆಗಳ ವಿವರ, ವಹಿವಾಟುಗಳ ವಿವರಗಳನ್ನು ಐಟಿ ಕಾಯ್ದೆ 114ಬಿಯಡಿ ಒದಗಿಸಬೇಕೆಂದು ಬ್ಯಾಂಕುಗಳಿಗೆ ಸೂಚಿಸಿದೆ. 114ಬಿ ಅನೇಕ ವಹಿವಾಟುಗಳನ್ನು ಪಟ್ಟಿ ಮಾಡುತ್ತಿದ್ದು ಅದಕ್ಕೆ ಪಾನ್ ಸಂಖ್ಯೆ ಕಡ್ಡಾಯವಾಗಿರುತ್ತದೆ.
ನೋಟುಗಳ ಚಲಾವಣೆ ಹಿಂತೆಗೆತದ ನಂತರ ಆದಾಯ ತೆರಿಗೆ ಇಲಾಖೆ ಬ್ಯಾಂಕು ಮತ್ತು ಅಂಚೆ ಕಚೇರಿಗಳಿಗೆ ನಿರ್ದೇಶನ ನೀಡಿ ಉಳಿತಾಯ ಖಾತೆಗಳಲ್ಲಿ ಎರಡೂವರೆ ಲಕ್ಷಕ್ಕಿಂತ ಹೆಚ್ಚು ಹಣ ಠೇವಣಿಯಿಟ್ಟರೆ ಮತ್ತು ಪ್ರಚಲಿತ ಖಾತೆಯಲ್ಲಿ 12.50 ಲಕ್ಷಕ್ಕಿಂತ ಹೆಚ್ಚು ಹಣವನ್ನು ನವೆಂಬರ್ 10, 2016ರಿಂದ ಡಿಸೆಂಬರ್ 30ರೊಳಗೆ ಹೂಡಿಕೆ ಮಾಡಿದವರ ವಿವರ ಮತ್ತು ದಿನಕ್ಕೆ 50,000ಕ್ಕಿಂತ ಹೆಚ್ಚು ಹೂಡಿಕೆ ಮಾಡಿದವರ ವಿವರ ನೀಡಬೇಕೆಂದು ಆದೇಶ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT