ಸಾಂದರ್ಭಿಕ ಚಿತ್ರ 
ವಾಣಿಜ್ಯ

2016,ಏ. 1ರಿಂದ ನ. 9ರವರೆಗಿನ ಉಳಿತಾಯ ಠೇವಣಿ ವರದಿ ನೀಡಲು ಐಟಿ ಇಲಾಖೆ ಬ್ಯಾಂಕು, ಅಂಚೆ ಕಚೇರಿಗಳಿಗೆ ಸೂಚನೆ

2016 ಏಪ್ರಿಲ್ 1ರಿಂದ ನವೆಂಬರ್ 9ರವರೆಗೆ ಬ್ಯಾಂಕುಗಳ ಉಳಿತಾಯ ಖಾತೆಗಳಲ್ಲಿ ಠೇವಣಿಯಾಗಿರುವ ಹಣದ ಬಗ್ಗೆ ಲೆಕ್ಕ...

ನವದೆಹಲಿ: 2016 ಏಪ್ರಿಲ್ 1ರಿಂದ ನವೆಂಬರ್ 9ರವರೆಗೆ ಬ್ಯಾಂಕುಗಳ ಉಳಿತಾಯ ಖಾತೆಗಳಲ್ಲಿ ಠೇವಣಿಯಾಗಿರುವ ಹಣದ ಬಗ್ಗೆ ಲೆಕ್ಕ ನೀಡುವಂತೆ ಆದಾಯ ತೆರಿಗೆ ಇಲಾಖೆ ಬ್ಯಾಂಕುಗಳಿಗೆ ಸೂಚಿಸಿದೆ.
ನವೆಂಬರ್ 8ರಂದು ಅಧಿಕ ಮೌಲ್ಯದ ನೋಟುಗಳ ಚಲಾವಣೆ ಹಿಂತೆಗೆತದ ನಂತರ ಪ್ರತಿ ತಿಂಗಳು ಬ್ಯಾಂಕುಗಳಲ್ಲಿ ಆದ ಹಣದ ವಹಿವಾಟುಗಳನ್ನು ವಿಶ್ಲೇಷಿಸಲು ಆದಾಯ ತೆರಿಗೆ ಇಲಾಖೆ ಈ ಕ್ರಮ ಕೈಗೊಂಡಿದೆ.
ಅಲ್ಲದೆ ಬ್ಯಾಂಕುಗಳಿಗೆ ಪ್ಯಾನ್ ಸಂಖ್ಯೆ ಒದಗಿಸದ ಅಥವಾ ಖಾತೆ ತೆರೆಯುವ ಸಂದರ್ಭದಲ್ಲಿ ಅರ್ಜಿ ಸಂಖ್ಯೆ 60 ನೀಡದ ಖಾತೆದಾರರು ಈ ವರ್ಷ ಫೆಬ್ರವರಿ 28ರೊಳಗೆ ನೀಡುವಂತೆ ಕೂಡ ಬ್ಯಾಂಕುಗಳು ಗ್ರಾಹಕರಿಗೆ ನಿರ್ದೇಶನ ನೀಡಬೇಕೆಂದು ಹೇಳಿದೆ.
ಅಧಿಸೂಚನೆ ಪ್ರಕಾರ, ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು ಮತ್ತು ಅಂಚೆ ಕಚೇರಿಗಳು ಕಳೆದ ವರ್ಷ ಏಪ್ರಿಲ್ 1ರಿಂದ ನವೆಂಬರ್ 9ರವರೆಗೆ ಮಾಡಿದ ಎಲ್ಲಾ ಠೇವಣಿ ಸಂಗ್ರಹದ ವಿವರಗಳನ್ನು ಆದಾಯ ತೆರಿಗೆ ಇಲಾಖೆಗೆ ನೀಡಬೇಕು.
ಅಲ್ಲದೆ ಠೇವಣಿದಾರರಿಂದ ಪಾನ್ ಸಂಖ್ಯೆ ಅಥವಾ ಅರ್ಜಿ ಸಂಖ್ಯೆ 60ರಡಿ ತೆರೆದ ಖಾತೆಗಳ ವಿವರ, ವಹಿವಾಟುಗಳ ವಿವರಗಳನ್ನು ಐಟಿ ಕಾಯ್ದೆ 114ಬಿಯಡಿ ಒದಗಿಸಬೇಕೆಂದು ಬ್ಯಾಂಕುಗಳಿಗೆ ಸೂಚಿಸಿದೆ. 114ಬಿ ಅನೇಕ ವಹಿವಾಟುಗಳನ್ನು ಪಟ್ಟಿ ಮಾಡುತ್ತಿದ್ದು ಅದಕ್ಕೆ ಪಾನ್ ಸಂಖ್ಯೆ ಕಡ್ಡಾಯವಾಗಿರುತ್ತದೆ.
ನೋಟುಗಳ ಚಲಾವಣೆ ಹಿಂತೆಗೆತದ ನಂತರ ಆದಾಯ ತೆರಿಗೆ ಇಲಾಖೆ ಬ್ಯಾಂಕು ಮತ್ತು ಅಂಚೆ ಕಚೇರಿಗಳಿಗೆ ನಿರ್ದೇಶನ ನೀಡಿ ಉಳಿತಾಯ ಖಾತೆಗಳಲ್ಲಿ ಎರಡೂವರೆ ಲಕ್ಷಕ್ಕಿಂತ ಹೆಚ್ಚು ಹಣ ಠೇವಣಿಯಿಟ್ಟರೆ ಮತ್ತು ಪ್ರಚಲಿತ ಖಾತೆಯಲ್ಲಿ 12.50 ಲಕ್ಷಕ್ಕಿಂತ ಹೆಚ್ಚು ಹಣವನ್ನು ನವೆಂಬರ್ 10, 2016ರಿಂದ ಡಿಸೆಂಬರ್ 30ರೊಳಗೆ ಹೂಡಿಕೆ ಮಾಡಿದವರ ವಿವರ ಮತ್ತು ದಿನಕ್ಕೆ 50,000ಕ್ಕಿಂತ ಹೆಚ್ಚು ಹೂಡಿಕೆ ಮಾಡಿದವರ ವಿವರ ನೀಡಬೇಕೆಂದು ಆದೇಶ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT