ನರೇಂದ್ರ ಮೋದಿ 
ವಾಣಿಜ್ಯ

ನೋಟ್ ಬ್ಯಾನ್: ಆರ್ ಬಿಐ ವಿವರಣೆ ತೃಪ್ತಿಕರವಲ್ಲದಿದ್ದರೆ, ಪಿಎಸಿಯಿಂದ ಪ್ರಧಾನಿಗೆ ನೋಟಿಸ್ ಸಾಧ್ಯತೆ

ನೋಟ್ ನಿಷಧಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್‌...

ನವದೆಹಲಿ: ನೋಟ್ ನಿಷಧಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್‌(ಆರ್ ಬಿಐ) ಗವರ್ನರ್‌ ಉರ್ಜಿತ್ ಪಟೇಲ್‌ ಅವರು ಸಂಸತ್ ಸಾರ್ವಜನಿಕ ಲೆಕ್ಕಪತ್ರ ಸಮಿತಿ(ಪಿಎಸಿ)ಗೆ ನೀಡುವ ವಿವರಣೆ ತೃಪ್ತಿಕರವಲ್ಲದಿದ್ದರೆ ಪ್ರಧಾನಿ ನರೇಂದ್ರ ಅವರಿಗೆ ಪಿಎಸಿ ವಿವರಣೆ ಕೋರಿ ನೋಟಿಸ್ ನೀಡುವ ಸಾಧ್ಯತೆ ಇದೆ.
ಈ ಸಂಬಂಧ ಇದೇ 20ರಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಆರ್ ಬಿಐ ಗವರ್ನರ್ ಉರ್ಜಿತ್ ಪಟೇಲ್, ಹಣಕಾಸು ಕಾರ್ಯದರ್ಶಿ ಅಶೋಕ್ ಲವಸಾ ಮತ್ತು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ಅವರು ಭಾಗವಹಿಸಲಿದ್ದಾರೆ.
ನೋಟು ನಿಷೇಧಕ್ಕೆ ಸಂಬಂಧಿಸಿದಂತೆ ನಾವು ಅವರಿಗೆ ಕಳಹಿಸಿರುವ ಪ್ರಶ್ನೆಗೆ ಇನ್ನೂ ಉತ್ತರ ಬಂದಿಲ್ಲ. ಜನವರಿ 20ರ ಸಭೆಗೂ ಮುನ್ನ ಪ್ರತಿಕ್ರಿಯೆ ಬರುವ ಸಾಧ್ಯತೆ. ಅವರ ಪ್ರತಿಕ್ರಿಯೆಯನ್ನು ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಗುವುದು ಎಂದು ಪಿಎಸಿ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್‌ ನಾಯಕ ಕೆ.ವಿ. ಥಾಮಸ್ ಅವರು ಹೇಳಿದ್ದಾರೆ.
ಒಂದು ವೇಳೆ ಉರ್ಜಿತ್ ಅವರು ನೀಡಿರುವ ವಿವರಣೆ ತೃಪ್ತಿಕರವಲ್ಲದೇ ಇದ್ದರೆ, ಪ್ರಧಾನಿ ಮೋದಿಯವರಿಗೆ ನೋಟಿಸ್ ನೀಡಲಾಗುವುದೇ? ಎಂಬ ಪ್ರಶ್ನೆಗೆ ಉತ್ತರಿಸಿದ ಥಾಮಸ್ ಅವರು, ನೋಟು ರದ್ದತಿ ವಿಷಯಕ್ಕೆ ಸಂಬಂಧಪಟ್ಟಂತೆ ಯಾವುದೇ ವ್ಯಕ್ತಿಯಲ್ಲೂ ವಿವರಣೆ ಕೇಳಬಹುದು. ಆದರೆ ಜನವರಿ 20ರಂದು ನಡೆಯಲಿರುವ ಸಭೆಯ ನಂತರವೇ ಈ ಬಗ್ಗೆ ಯೋಚಿಸಲಾಗುವುದು ಎಂದರು.
ಒಂದು ವೇಳೆ ಪ್ರಧಾನಿ ನೋಟಿಸ್ ನೀಡುವ ಬಗ್ಗೆ ನಮ್ಮ ಸದಸ್ಯರು ಒಮ್ಮತದ ತೀರ್ಮಾನ ತೆಗೆದುಕೊಂಡರೆ, ಪ್ರಧಾನಿಯವರಲ್ಲಿಯೂ ವಿವರಣೆ ಕೇಳಲಾಗುವುದು ಎಂದು ಥಾಮಸ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT