ಸಾಂದರ್ಭಿಕ ಚಿತ್ರ 
ವಾಣಿಜ್ಯ

ನೌಕರರ ಭವಿಷ್ಯ ನಿಧಿ ಸಂಘಟನೆಯಿಂದ ವಿಶೇಷ ನೋಂದಣಿ ಅಭಿಯಾನ

ನೌಕರರ ಭವಿಷ್ಯ ನಿಧಿ ಸಂಘಟನೆಯ ಪ್ರಾದೇಶಿಕ ಕಚೇರಿ ಬೆಂಗಳೂರಿನಲ್ಲಿ ನೌಕರರ ವಿಶೇಷ ನೋಂದಣಿ ಅಭಿಯಾನ-2017...

ಬೆಂಗಳೂರು: ನೌಕರರ ಭವಿಷ್ಯ ನಿಧಿ ಸಂಘಟನೆಯ ಪ್ರಾದೇಶಿಕ ಕಚೇರಿ ಬೆಂಗಳೂರಿನಲ್ಲಿ ನೌಕರರ ವಿಶೇಷ ನೋಂದಣಿ ಅಭಿಯಾನ-2017 ಅನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿ ನೌಕರರ ಭವಿಷ್ಯ ನಿಧಿ ಯೋಜನೆಯಿಂದ ಹೊರಗಿರುವ ನೌಕರರನ್ನು ಭವಿಷ್ಯ ನಿಧಿ ವ್ಯಾಪ್ತಿಗೆ ತರಲಾಗುತ್ತಿದೆ.
ಈ ಅಭಿಯಾನವು ಜನವರಿ 1, 2017ರಿಂದ ಮಾರ್ಚ್ 31, 2017ರವೆರೆಗೆ ಚಾಲ್ತಿಯಲ್ಲಿರಲಿದ್ದು, ಬೆಂಗಳೂರು ಸಹಾಯಕ ಭವಿಷ್ಯನಿಧಿ ಆಯುಕ್ತರ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.
ಅವಕಾಶವನ್ನು ಎಲ್ಲಾ ಸಂಸ್ಥೆಗಳ ಮಾಲೀಕರು ಸದುಪಯೋಗಪಡಿಸಿಕೊಂಡು, ನೋಂದಣಿಯಾಗದಿರುವ ನೌಕರರನ್ನು ಭವಿಷ್ಯ ನಿಧಿ ವ್ಯಾಪ್ತಿಗೆ ತರುವ ಮೂಲಕ ಏಪ್ರಿಲ್ 1, 2009ರಿಂದ ಡಿಸೆಂಬರ್ 31, 2016ರವರೆಗಿನ ನೌಕರರ ಪಾಲಿನ ಭವಿಷ್ಯ ನಿಧಿ ವಂತಿಕೆಯ ರಿಯಾಯಿತಿ ಪಡೆಯಬೇಕೆಂದು ತಿಳಿಸಲಾಗಿದ್ದು, ಇದಕ್ಕೆ ಮಾರ್ಚ್ 31 ಕೊನೆಯ ದಿನವಾಗಿದೆ.
ಭವಿಷ್ಯದಲ್ಲಿ ಭವಿಷ್ಯ ನಿಧಿಯ ಲಾಭ ಪಡೆಯಲು ಎಲ್ಲಾ ಸದಸ್ಯರು ಮತ್ತು ಪಿಂಚಣಿದಾರರು ತಮ್ಮ ಆಧಾರ ಕಾರ್ಡ್ ಸಂಖ್ಯೆಯನ್ನು ನಮೂದಿಸವುದು/ ಲಿಂಕ್ ಮಾಡವುದು ಕಡ್ಡಾಯಗೊಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನೌಕರರ ಭವಿಷ್ಯ ನಿಧಿ ಸಂಘಟನೆಯ ವೆಬ್ ಸೈಟ್ www.epfindia.gov.in  ಗೆ ಭೇಟಿ ನೀಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT